ಭಯೋತ್ಪಾದನೆ ಕುರಿತ ವಿಶ್ವಸಂಸ್ಥೆಯ ವರದಿಯು ಕೇರಳ ಮತ್ತು ಕರ್ನಾಟಕದಲ್ಲಿ ಗಮನಾರ್ಹ ಸಂಖ್ಯೆಯ ಐಸಿಸ್ ಭಯೋತ್ಪಾದಕರು ಇದ್ದಾರೆ ಎಂದು ಎಚ್ಚರಿಸಿದೆ. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ನಿಂದ 150 ರಿಂದ 200 ಉಗ್ರರನ್ನು ಹೊಂದಿರುವ ಭಯೋತ್ಪಾದಕ ಗುಂಪಿನಲ್ಲಿರುವ ಅಲ್-ಖೈದಾ ವಿವಿಧ ಪ್ರದೇಶದಲ್ಲಿ ದಾಳಿ ಯೋಜಿಸುತ್ತಿದೆ ಎಂದು ಈ ವರದಿ ಎಚ್ಚರಿಸಿದೆ.
ವಿಶೇಷವಾಗಿ ಕರ್ನಾಟಕ ಮತ್ತು ಕೇರಳದಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ಐಸಿಸ್ ಭಯೋತ್ಪಾದಕರು ನೆಲೆ ಕಂಡುಕೊಂಡಿದ್ದಾರೆ ಎಂದು ವಿಶ್ವ ಸಂಸ್ಥೆಯ ವರದಿ ಉಲ್ಲೇಖಿಸಿದೆ.
ಐಸಿಸ್, ಅಲ್-ಖೈದಾ ಮತ್ತು ಇತರ ವ್ಯಕ್ತಿಗಳು ಮತ್ತು ಘಟಕಗಳು ಈ ತಂಡಕ್ಕೆ ಬೆಂಬಲ ನೀಡುತ್ತಿದ್ದು2-3 ಉಗ್ರ ಸಂಘಟನೆಗಳು ಜೊತೆಯಾಗಿ ತ್ರಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿರುವ ಈ ವರದಿ ಅಲ್ ಖೈದಾ ಗುಂಪಿನ ನಾಯಕ ಆಸಿಮ್ ಉಮರ್ ಮೃತಪಟ್ಟ ನಂತರ ಇದರ ನಾಯಕತ್ವವನ್ನು ಭಾರತದಲ್ಲಿ ಒಸಮಾ ಮೊಹಮ್ಮದ್ ವಹಿಸಿಕೊಂಡಿದ್ದಾನೆ. ಈತ ಮಾಜಿ ನಾಯಕನ ಸಾವಿಗೆ ಪ್ರತೀಕಾರದ ಕಾರ್ಯಾಚರಣೆಯನ್ನು ಯೋಜಿಸುತ್ತಿದ್ದಾನೆ ಎಂದು ವರದಿ ಮಾಡಿದೆ. ಇದಕ್ಕಾಗಿ ಈ ಗುಂಪಿನಲ್ಲಿ ಬಾಂಗ್ಲಾದೇಶ, ಭಾರತ, ಮ್ಯಾನ್ಮಾರ್ ಮತ್ತು ಪಾಕಿಸ್ತಾನದ 150 ರಿಂದ 200 ಸದಸ್ಯರು ಇದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷ ಮೇ ತಿಂಗಳಲ್ಲಿ, ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಗುಂಪು ಭಾರತದಲ್ಲಿ ಹೊಸ ಪ್ರಾಂತ್ಯ ವನ್ನು ಸ್ಥಾಪಿಸಿದೆ ಎಂದು ಹೇಳಿಕೊಂಡಿದೆ, ಇದು ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯ ನಂತರ ಬಂದ ಮೊದಲ ರೀತಿಯ ಘೋಷಣೆಯಾಗಿದೆ. ಇದೀಗ ಸಂಘಟನೆಯ ಪ್ರಮುಖರು ಹಾಗೂ ಸದಸ್ಯರು ಕರ್ನಾಟಕ ಹಾಗೂ ಕೇರಳದಲ್ಲಿ ನಲೆಯೂರಿದ್ದಾರೆ ಎಂದು ವಿಶ್ವ ಸಂಸ್ಥೆಯ ವರದಿಯಲ್ಲಿ ತಿಳಿಸಲಾಗಿದೆ.
( ಮೂಲ: ಪಿಟಿಐ)
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…