Advertisement
ರಾಷ್ಟ್ರೀಯ

ಕೇರಳ-ಕರ್ನಾಟಕದಲ್ಲಿ ಗಮನಾರ್ಹ ಸಂಖ್ಯೆಯಲ್ಲಿದ್ದಾರೆ ಐಸಿಸ್‌ ಉಗ್ರರು…..! ವಿಶ್ವಸಂಸ್ಥೆ ಎಚ್ಚರಿಸಿದ ವರದಿ…..!

Share

ಭಯೋತ್ಪಾದನೆ ಕುರಿತ  ವಿಶ್ವಸಂಸ್ಥೆಯ ವರದಿಯು ಕೇರಳ ಮತ್ತು ಕರ್ನಾಟಕದಲ್ಲಿ ಗಮನಾರ್ಹ ಸಂಖ್ಯೆಯ ಐಸಿಸ್ ಭಯೋತ್ಪಾದಕರು ಇದ್ದಾರೆ ಎಂದು ಎಚ್ಚರಿಸಿದೆ. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನಿಂದ 150 ರಿಂದ 200 ಉಗ್ರರನ್ನು ಹೊಂದಿರುವ ಭಯೋತ್ಪಾದಕ ಗುಂಪಿನಲ್ಲಿರುವ ಅಲ್-ಖೈದಾ ವಿವಿಧ ಪ್ರದೇಶದಲ್ಲಿ ದಾಳಿ ಯೋಜಿಸುತ್ತಿದೆ ಎಂದು ಈ ವರದಿ ಎಚ್ಚರಿಸಿದೆ.

ವಿಶೇಷವಾಗಿ  ಕರ್ನಾಟಕ ಮತ್ತು ಕೇರಳದಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ಐಸಿಸ್ ಭಯೋತ್ಪಾದಕರು ನೆಲೆ ಕಂಡುಕೊಂಡಿದ್ದಾರೆ  ಎಂದು ವಿಶ್ವ ಸಂಸ್ಥೆಯ ವರದಿ ಉಲ್ಲೇಖಿಸಿದೆ.

ಐಸಿಸ್, ಅಲ್-ಖೈದಾ ಮತ್ತು ಇತರ ವ್ಯಕ್ತಿಗಳು ಮತ್ತು ಘಟಕಗಳು ಈ ತಂಡಕ್ಕೆ ಬೆಂಬಲ ನೀಡುತ್ತಿದ್ದು2-3 ಉಗ್ರ ಸಂಘಟನೆಗಳು ಜೊತೆಯಾಗಿ ತ್ರಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿರುವ ಈ ವರದಿ ಅಲ್ ಖೈದಾ ಗುಂಪಿನ ನಾಯಕ ಆಸಿಮ್ ಉಮರ್  ಮೃತಪಟ್ಟ ನಂತರ ಇದರ ನಾಯಕತ್ವವನ್ನು ಭಾರತದಲ್ಲಿ ಒಸಮಾ ಮೊಹಮ್ಮದ್ ವಹಿಸಿಕೊಂಡಿದ್ದಾನೆ. ಈತ ಮಾಜಿ ನಾಯಕನ ಸಾವಿಗೆ ಪ್ರತೀಕಾರದ ಕಾರ್ಯಾಚರಣೆಯನ್ನು ಯೋಜಿಸುತ್ತಿದ್ದಾನೆ ಎಂದು ವರದಿ ಮಾಡಿದೆ.‌ ಇದಕ್ಕಾಗಿ ಈ ಗುಂಪಿನಲ್ಲಿ ಬಾಂಗ್ಲಾದೇಶ, ಭಾರತ, ಮ್ಯಾನ್ಮಾರ್ ಮತ್ತು ಪಾಕಿಸ್ತಾನದ 150 ರಿಂದ 200 ಸದಸ್ಯರು ಇದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷ ಮೇ ತಿಂಗಳಲ್ಲಿ, ಇಸ್ಲಾಮಿಕ್ ಸ್ಟೇಟ್  ಭಯೋತ್ಪಾದಕ ಗುಂಪು ಭಾರತದಲ್ಲಿ ಹೊಸ ಪ್ರಾಂತ್ಯ ವನ್ನು ಸ್ಥಾಪಿಸಿದೆ ಎಂದು ಹೇಳಿಕೊಂಡಿದೆ, ಇದು ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯ ನಂತರ ಬಂದ ಮೊದಲ ರೀತಿಯ ಘೋಷಣೆಯಾಗಿದೆ. ಇದೀಗ ಸಂಘಟನೆಯ ಪ್ರಮುಖರು ಹಾಗೂ ಸದಸ್ಯರು ಕರ್ನಾಟಕ ಹಾಗೂ ಕೇರಳದಲ್ಲಿ ನಲೆಯೂರಿದ್ದಾರೆ ಎಂದು ವಿಶ್ವ ಸಂಸ್ಥೆಯ ವರದಿಯಲ್ಲಿ  ತಿಳಿಸಲಾಗಿದೆ.

( ಮೂಲ: ಪಿಟಿಐ)

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

10 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago