Advertisement
ರಾಷ್ಟ್ರೀಯ

ಕೇರಳ-ಕರ್ನಾಟಕದಲ್ಲಿ ಗಮನಾರ್ಹ ಸಂಖ್ಯೆಯಲ್ಲಿದ್ದಾರೆ ಐಸಿಸ್‌ ಉಗ್ರರು…..! ವಿಶ್ವಸಂಸ್ಥೆ ಎಚ್ಚರಿಸಿದ ವರದಿ…..!

Share

ಭಯೋತ್ಪಾದನೆ ಕುರಿತ  ವಿಶ್ವಸಂಸ್ಥೆಯ ವರದಿಯು ಕೇರಳ ಮತ್ತು ಕರ್ನಾಟಕದಲ್ಲಿ ಗಮನಾರ್ಹ ಸಂಖ್ಯೆಯ ಐಸಿಸ್ ಭಯೋತ್ಪಾದಕರು ಇದ್ದಾರೆ ಎಂದು ಎಚ್ಚರಿಸಿದೆ. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನಿಂದ 150 ರಿಂದ 200 ಉಗ್ರರನ್ನು ಹೊಂದಿರುವ ಭಯೋತ್ಪಾದಕ ಗುಂಪಿನಲ್ಲಿರುವ ಅಲ್-ಖೈದಾ ವಿವಿಧ ಪ್ರದೇಶದಲ್ಲಿ ದಾಳಿ ಯೋಜಿಸುತ್ತಿದೆ ಎಂದು ಈ ವರದಿ ಎಚ್ಚರಿಸಿದೆ.

ವಿಶೇಷವಾಗಿ  ಕರ್ನಾಟಕ ಮತ್ತು ಕೇರಳದಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ಐಸಿಸ್ ಭಯೋತ್ಪಾದಕರು ನೆಲೆ ಕಂಡುಕೊಂಡಿದ್ದಾರೆ  ಎಂದು ವಿಶ್ವ ಸಂಸ್ಥೆಯ ವರದಿ ಉಲ್ಲೇಖಿಸಿದೆ.

ಐಸಿಸ್, ಅಲ್-ಖೈದಾ ಮತ್ತು ಇತರ ವ್ಯಕ್ತಿಗಳು ಮತ್ತು ಘಟಕಗಳು ಈ ತಂಡಕ್ಕೆ ಬೆಂಬಲ ನೀಡುತ್ತಿದ್ದು2-3 ಉಗ್ರ ಸಂಘಟನೆಗಳು ಜೊತೆಯಾಗಿ ತ್ರಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿರುವ ಈ ವರದಿ ಅಲ್ ಖೈದಾ ಗುಂಪಿನ ನಾಯಕ ಆಸಿಮ್ ಉಮರ್  ಮೃತಪಟ್ಟ ನಂತರ ಇದರ ನಾಯಕತ್ವವನ್ನು ಭಾರತದಲ್ಲಿ ಒಸಮಾ ಮೊಹಮ್ಮದ್ ವಹಿಸಿಕೊಂಡಿದ್ದಾನೆ. ಈತ ಮಾಜಿ ನಾಯಕನ ಸಾವಿಗೆ ಪ್ರತೀಕಾರದ ಕಾರ್ಯಾಚರಣೆಯನ್ನು ಯೋಜಿಸುತ್ತಿದ್ದಾನೆ ಎಂದು ವರದಿ ಮಾಡಿದೆ.‌ ಇದಕ್ಕಾಗಿ ಈ ಗುಂಪಿನಲ್ಲಿ ಬಾಂಗ್ಲಾದೇಶ, ಭಾರತ, ಮ್ಯಾನ್ಮಾರ್ ಮತ್ತು ಪಾಕಿಸ್ತಾನದ 150 ರಿಂದ 200 ಸದಸ್ಯರು ಇದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷ ಮೇ ತಿಂಗಳಲ್ಲಿ, ಇಸ್ಲಾಮಿಕ್ ಸ್ಟೇಟ್  ಭಯೋತ್ಪಾದಕ ಗುಂಪು ಭಾರತದಲ್ಲಿ ಹೊಸ ಪ್ರಾಂತ್ಯ ವನ್ನು ಸ್ಥಾಪಿಸಿದೆ ಎಂದು ಹೇಳಿಕೊಂಡಿದೆ, ಇದು ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯ ನಂತರ ಬಂದ ಮೊದಲ ರೀತಿಯ ಘೋಷಣೆಯಾಗಿದೆ. ಇದೀಗ ಸಂಘಟನೆಯ ಪ್ರಮುಖರು ಹಾಗೂ ಸದಸ್ಯರು ಕರ್ನಾಟಕ ಹಾಗೂ ಕೇರಳದಲ್ಲಿ ನಲೆಯೂರಿದ್ದಾರೆ ಎಂದು ವಿಶ್ವ ಸಂಸ್ಥೆಯ ವರದಿಯಲ್ಲಿ  ತಿಳಿಸಲಾಗಿದೆ.

( ಮೂಲ: ಪಿಟಿಐ)

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

12 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

12 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago