ಕೃಷಿ

ಕೇರಳ-ಕರ್ನಾಟಕ ಗಡಿಪ್ರದೇಶದ ಜನವಸತಿ ಸಮೀಪ ಕಾಡಾನೆ ಹಿಂಡು- ಆನೆಗಳನ್ನು ಕಾಡಿಗೆ ಅಟ್ಟಲು ಆಗ್ರಹ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಲಂಪಾಡಿ: ಕೇರಳ-ಕರ್ನಾಟಕ ಗಡಿ ಪ್ರದೇಶದಲ್ಲಿ ಜನವಸತಿ ಪ್ರದೇಶದ ಸಮೀಪ 12 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಆರು ಆನೆಗಳ ಎರಡು ಹಿಂಡುಗಳಾಗಿ ಬೀಡು ಬಿಟ್ಟಿದೆ. ಬೆಳ್ಳಿಪ್ಪಾಡಿ ಪ್ರದೇಶದಲ್ಲಿ ಆರು ಆನೆಗಳ ಹಿಂಡು ಮತ್ತು ಮಯ್ಯಾಳ-ನೂಜಿಬೆಟ್ಟು ಪ್ರದೇಶದಲ್ಲಿ ಆರು ಆನೆಗಳು ಬೀಡು ಬಿಟ್ಟಿದ್ದು ಕೃಷಿಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಭೀತಿಯಲ್ಲಿ ದಿನ ಕಳೆಯುವಂತಾಗಿದೆ.

Advertisement
Advertisement

ಬೆಳ್ಳಿಪ್ಪಾಡಿ ಭಾಗದಲ್ಲಿ ವ್ಯಾಪಕ ಕೃಷಿ ಹಾನಿಯನ್ನೂ ಮಾಡಿದೆ. ಆದುದರಿಂದ ಆನೆಗಳನ್ನು ದೂರ ಅಟ್ಟಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಮುಂದಾಳು ಹಾಗೂ ಮುಳಿಯಾರು ವಲಯ ಅಡಿಕೆ ಕೃಷಿಕರ ಸಂರಕ್ಷಣಾ ಸಮಿತಿ ಸಂಚಾಲಕ ಬೆಳ್ಳಿಪ್ಪಾಡಿ ಸದಾಶಿವ ರೈ ಆಗ್ರಹಿಸಿದ್ದಾರೆ. ಕೇರಳದ ದೇಲಂಪಾಡಿ ಮತ್ತು ಕರ್ನಾಟಕದ ಮಂಡೆಕೋಲು ಗ್ರಾಮದಲ್ಲಿ ಹಲವು ವರ್ಷಗಳಿಂದ ಕಾಡಾನೆ ಹಾವಳಿ ಇದ್ದು ಆನೆಗಳು ಕೃಷಿ ನಾಶ ಮಾಡುತಿದೆ. ದೇಲಂಪಾಡಿ ಗ್ರಾಮದಲ್ಲಿ ಆನೆ ಹಾವಳಿಯಿಂದ ಭಾರೀ ಪ್ರಮಾಣದಲ್ಲಿ ಕೃಷಿ ನಾಶ ನಷ್ಟ ಸಂಭವಿಸಿದ್ದರೂ, ಸರಕಾರಕ್ಕೆ ಎಷ್ಟು ಮನವಿಯನ್ನು ಸಮರ್ಪಿಸಿದ್ದರೂ ಯಾವ ಕೃಷಿಕನಿಗೂ ಕೇರಳ ಸರಕಾರದಿಂದ ಯಾವುದೇ ಪರಿಹಾರ ದೊರಕಿರುವುದಿಲ್ಲ ಮತ್ತು ಆನೆ ಹಾವಳಿ ತಡೆಯಲು ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ. ಈ ವರ್ಷ ಧಾರಕಾರವಾಗಿ ಸುರಿದ ಮಳೆಯ ಪ್ರಭಾವದಿಂದ ಅಡಿಕೆ ಮರದ ಫಸಲು ತೀರಾ ಕಡಿಮೆಯಾಗಿದೆ. ಕೃಷಿಕ ತತ್ತರಿಸುತ್ತಿರುವ ವೇಳೆ ಮತ್ತೊಂದೆಡೆ ಆನೆಗಳ ಭೀತಿ ಕಾಡುತ್ತಾ ಇದೆ.

ಅಲ್ಲದೆ ಕಳೆದ ಒಂದು ವಾರದಿಂದ ಪರಪ್ಪ ರಕ್ಷಿತಾರಣ್ಯದ ಬೆಳ್ಳಿಪ್ಪಾಡಿ-ದೇವರಗುಂಡ ಪ್ರದೇಶದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ ಎಂದು ತಿಳಿದು ಬರುತ್ತಿದೆ. ದೇವರಗುಂಡದಲ್ಲಿ ನಾಯಿಯೊಂದನ್ನು ಚಿರತೆಯು ಕೊಂದಿರುವುದನ್ನು ಸ್ಥಳೀಯರು ಖಚಿತಪಡಿಸಿರುತ್ತಾರೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ-ಪರಪ್ಪ ಪ್ರದೇಶದ ನಿವಾಸಿಗಳಾದ ನೂರಕ್ಕೂ ಹೆಚ್ಚು ಮಕ್ಕಳು ಜಾಲ್ಸೂರು-ಸುಳ್ಯದ ವಿವಿಧ ವಿದ್ಯಾಲಯಗಳಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದಾರೆ. ಎಲ್ಲಾ ರಸ್ತೆ-ದಾರಿಗಳು ರಕ್ಷಿತಾರಣ್ಯದ ಮಧ್ಯೆ ಹಾದು ಹೋಗುತ್ತಿದೆ. ಜನರು ರಸ್ತೆಗೆ ಇಳಿಯಲು ಭಯ ಪಡುವ ಸ್ಥಿತಿ ಉಂಟಾಗಿದೆ. ಆದುದರಿಂದ ಆನೆಗಳನ್ನು ಕಾಡಿಗೆ ಅಟ್ಟಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕೃಷಿಕರು ಧರಣಿ ಸತ್ಯಾಗ್ರಹ ಮಾಡಬೇಕಾದ ಅನಿವಾರ್ಯತೆ ಉಂಟಾಗಬಹುದು ಎಂದು ಬೆಳ್ಳಿಪ್ಪಾಡಿ ಸದಶಿವ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

5 hours ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

5 hours ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

5 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

5 hours ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

15 hours ago