Advertisement
ಕೃಷಿ

ಕೇರಳ-ಕರ್ನಾಟಕ ಗಡಿಪ್ರದೇಶದ ಜನವಸತಿ ಸಮೀಪ ಕಾಡಾನೆ ಹಿಂಡು- ಆನೆಗಳನ್ನು ಕಾಡಿಗೆ ಅಟ್ಟಲು ಆಗ್ರಹ

Share

ದೇಲಂಪಾಡಿ: ಕೇರಳ-ಕರ್ನಾಟಕ ಗಡಿ ಪ್ರದೇಶದಲ್ಲಿ ಜನವಸತಿ ಪ್ರದೇಶದ ಸಮೀಪ 12 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಆರು ಆನೆಗಳ ಎರಡು ಹಿಂಡುಗಳಾಗಿ ಬೀಡು ಬಿಟ್ಟಿದೆ. ಬೆಳ್ಳಿಪ್ಪಾಡಿ ಪ್ರದೇಶದಲ್ಲಿ ಆರು ಆನೆಗಳ ಹಿಂಡು ಮತ್ತು ಮಯ್ಯಾಳ-ನೂಜಿಬೆಟ್ಟು ಪ್ರದೇಶದಲ್ಲಿ ಆರು ಆನೆಗಳು ಬೀಡು ಬಿಟ್ಟಿದ್ದು ಕೃಷಿಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಭೀತಿಯಲ್ಲಿ ದಿನ ಕಳೆಯುವಂತಾಗಿದೆ.

ಬೆಳ್ಳಿಪ್ಪಾಡಿ ಭಾಗದಲ್ಲಿ ವ್ಯಾಪಕ ಕೃಷಿ ಹಾನಿಯನ್ನೂ ಮಾಡಿದೆ. ಆದುದರಿಂದ ಆನೆಗಳನ್ನು ದೂರ ಅಟ್ಟಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಮುಂದಾಳು ಹಾಗೂ ಮುಳಿಯಾರು ವಲಯ ಅಡಿಕೆ ಕೃಷಿಕರ ಸಂರಕ್ಷಣಾ ಸಮಿತಿ ಸಂಚಾಲಕ ಬೆಳ್ಳಿಪ್ಪಾಡಿ ಸದಾಶಿವ ರೈ ಆಗ್ರಹಿಸಿದ್ದಾರೆ. ಕೇರಳದ ದೇಲಂಪಾಡಿ ಮತ್ತು ಕರ್ನಾಟಕದ ಮಂಡೆಕೋಲು ಗ್ರಾಮದಲ್ಲಿ ಹಲವು ವರ್ಷಗಳಿಂದ ಕಾಡಾನೆ ಹಾವಳಿ ಇದ್ದು ಆನೆಗಳು ಕೃಷಿ ನಾಶ ಮಾಡುತಿದೆ. ದೇಲಂಪಾಡಿ ಗ್ರಾಮದಲ್ಲಿ ಆನೆ ಹಾವಳಿಯಿಂದ ಭಾರೀ ಪ್ರಮಾಣದಲ್ಲಿ ಕೃಷಿ ನಾಶ ನಷ್ಟ ಸಂಭವಿಸಿದ್ದರೂ, ಸರಕಾರಕ್ಕೆ ಎಷ್ಟು ಮನವಿಯನ್ನು ಸಮರ್ಪಿಸಿದ್ದರೂ ಯಾವ ಕೃಷಿಕನಿಗೂ ಕೇರಳ ಸರಕಾರದಿಂದ ಯಾವುದೇ ಪರಿಹಾರ ದೊರಕಿರುವುದಿಲ್ಲ ಮತ್ತು ಆನೆ ಹಾವಳಿ ತಡೆಯಲು ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ. ಈ ವರ್ಷ ಧಾರಕಾರವಾಗಿ ಸುರಿದ ಮಳೆಯ ಪ್ರಭಾವದಿಂದ ಅಡಿಕೆ ಮರದ ಫಸಲು ತೀರಾ ಕಡಿಮೆಯಾಗಿದೆ. ಕೃಷಿಕ ತತ್ತರಿಸುತ್ತಿರುವ ವೇಳೆ ಮತ್ತೊಂದೆಡೆ ಆನೆಗಳ ಭೀತಿ ಕಾಡುತ್ತಾ ಇದೆ.

ಅಲ್ಲದೆ ಕಳೆದ ಒಂದು ವಾರದಿಂದ ಪರಪ್ಪ ರಕ್ಷಿತಾರಣ್ಯದ ಬೆಳ್ಳಿಪ್ಪಾಡಿ-ದೇವರಗುಂಡ ಪ್ರದೇಶದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ ಎಂದು ತಿಳಿದು ಬರುತ್ತಿದೆ. ದೇವರಗುಂಡದಲ್ಲಿ ನಾಯಿಯೊಂದನ್ನು ಚಿರತೆಯು ಕೊಂದಿರುವುದನ್ನು ಸ್ಥಳೀಯರು ಖಚಿತಪಡಿಸಿರುತ್ತಾರೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ-ಪರಪ್ಪ ಪ್ರದೇಶದ ನಿವಾಸಿಗಳಾದ ನೂರಕ್ಕೂ ಹೆಚ್ಚು ಮಕ್ಕಳು ಜಾಲ್ಸೂರು-ಸುಳ್ಯದ ವಿವಿಧ ವಿದ್ಯಾಲಯಗಳಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದಾರೆ. ಎಲ್ಲಾ ರಸ್ತೆ-ದಾರಿಗಳು ರಕ್ಷಿತಾರಣ್ಯದ ಮಧ್ಯೆ ಹಾದು ಹೋಗುತ್ತಿದೆ. ಜನರು ರಸ್ತೆಗೆ ಇಳಿಯಲು ಭಯ ಪಡುವ ಸ್ಥಿತಿ ಉಂಟಾಗಿದೆ. ಆದುದರಿಂದ ಆನೆಗಳನ್ನು ಕಾಡಿಗೆ ಅಟ್ಟಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕೃಷಿಕರು ಧರಣಿ ಸತ್ಯಾಗ್ರಹ ಮಾಡಬೇಕಾದ ಅನಿವಾರ್ಯತೆ ಉಂಟಾಗಬಹುದು ಎಂದು ಬೆಳ್ಳಿಪ್ಪಾಡಿ ಸದಶಿವ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

4 hours ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

1 day ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

1 day ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

3 days ago