Advertisement
ಕೃಷಿ

ಕೇರಳ-ಕರ್ನಾಟಕ ಗಡಿಪ್ರದೇಶದ ಜನವಸತಿ ಸಮೀಪ ಕಾಡಾನೆ ಹಿಂಡು- ಆನೆಗಳನ್ನು ಕಾಡಿಗೆ ಅಟ್ಟಲು ಆಗ್ರಹ

Share

ದೇಲಂಪಾಡಿ: ಕೇರಳ-ಕರ್ನಾಟಕ ಗಡಿ ಪ್ರದೇಶದಲ್ಲಿ ಜನವಸತಿ ಪ್ರದೇಶದ ಸಮೀಪ 12 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಆರು ಆನೆಗಳ ಎರಡು ಹಿಂಡುಗಳಾಗಿ ಬೀಡು ಬಿಟ್ಟಿದೆ. ಬೆಳ್ಳಿಪ್ಪಾಡಿ ಪ್ರದೇಶದಲ್ಲಿ ಆರು ಆನೆಗಳ ಹಿಂಡು ಮತ್ತು ಮಯ್ಯಾಳ-ನೂಜಿಬೆಟ್ಟು ಪ್ರದೇಶದಲ್ಲಿ ಆರು ಆನೆಗಳು ಬೀಡು ಬಿಟ್ಟಿದ್ದು ಕೃಷಿಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಭೀತಿಯಲ್ಲಿ ದಿನ ಕಳೆಯುವಂತಾಗಿದೆ.

ಬೆಳ್ಳಿಪ್ಪಾಡಿ ಭಾಗದಲ್ಲಿ ವ್ಯಾಪಕ ಕೃಷಿ ಹಾನಿಯನ್ನೂ ಮಾಡಿದೆ. ಆದುದರಿಂದ ಆನೆಗಳನ್ನು ದೂರ ಅಟ್ಟಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಮುಂದಾಳು ಹಾಗೂ ಮುಳಿಯಾರು ವಲಯ ಅಡಿಕೆ ಕೃಷಿಕರ ಸಂರಕ್ಷಣಾ ಸಮಿತಿ ಸಂಚಾಲಕ ಬೆಳ್ಳಿಪ್ಪಾಡಿ ಸದಾಶಿವ ರೈ ಆಗ್ರಹಿಸಿದ್ದಾರೆ. ಕೇರಳದ ದೇಲಂಪಾಡಿ ಮತ್ತು ಕರ್ನಾಟಕದ ಮಂಡೆಕೋಲು ಗ್ರಾಮದಲ್ಲಿ ಹಲವು ವರ್ಷಗಳಿಂದ ಕಾಡಾನೆ ಹಾವಳಿ ಇದ್ದು ಆನೆಗಳು ಕೃಷಿ ನಾಶ ಮಾಡುತಿದೆ. ದೇಲಂಪಾಡಿ ಗ್ರಾಮದಲ್ಲಿ ಆನೆ ಹಾವಳಿಯಿಂದ ಭಾರೀ ಪ್ರಮಾಣದಲ್ಲಿ ಕೃಷಿ ನಾಶ ನಷ್ಟ ಸಂಭವಿಸಿದ್ದರೂ, ಸರಕಾರಕ್ಕೆ ಎಷ್ಟು ಮನವಿಯನ್ನು ಸಮರ್ಪಿಸಿದ್ದರೂ ಯಾವ ಕೃಷಿಕನಿಗೂ ಕೇರಳ ಸರಕಾರದಿಂದ ಯಾವುದೇ ಪರಿಹಾರ ದೊರಕಿರುವುದಿಲ್ಲ ಮತ್ತು ಆನೆ ಹಾವಳಿ ತಡೆಯಲು ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ. ಈ ವರ್ಷ ಧಾರಕಾರವಾಗಿ ಸುರಿದ ಮಳೆಯ ಪ್ರಭಾವದಿಂದ ಅಡಿಕೆ ಮರದ ಫಸಲು ತೀರಾ ಕಡಿಮೆಯಾಗಿದೆ. ಕೃಷಿಕ ತತ್ತರಿಸುತ್ತಿರುವ ವೇಳೆ ಮತ್ತೊಂದೆಡೆ ಆನೆಗಳ ಭೀತಿ ಕಾಡುತ್ತಾ ಇದೆ.

ಅಲ್ಲದೆ ಕಳೆದ ಒಂದು ವಾರದಿಂದ ಪರಪ್ಪ ರಕ್ಷಿತಾರಣ್ಯದ ಬೆಳ್ಳಿಪ್ಪಾಡಿ-ದೇವರಗುಂಡ ಪ್ರದೇಶದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ ಎಂದು ತಿಳಿದು ಬರುತ್ತಿದೆ. ದೇವರಗುಂಡದಲ್ಲಿ ನಾಯಿಯೊಂದನ್ನು ಚಿರತೆಯು ಕೊಂದಿರುವುದನ್ನು ಸ್ಥಳೀಯರು ಖಚಿತಪಡಿಸಿರುತ್ತಾರೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ-ಪರಪ್ಪ ಪ್ರದೇಶದ ನಿವಾಸಿಗಳಾದ ನೂರಕ್ಕೂ ಹೆಚ್ಚು ಮಕ್ಕಳು ಜಾಲ್ಸೂರು-ಸುಳ್ಯದ ವಿವಿಧ ವಿದ್ಯಾಲಯಗಳಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದಾರೆ. ಎಲ್ಲಾ ರಸ್ತೆ-ದಾರಿಗಳು ರಕ್ಷಿತಾರಣ್ಯದ ಮಧ್ಯೆ ಹಾದು ಹೋಗುತ್ತಿದೆ. ಜನರು ರಸ್ತೆಗೆ ಇಳಿಯಲು ಭಯ ಪಡುವ ಸ್ಥಿತಿ ಉಂಟಾಗಿದೆ. ಆದುದರಿಂದ ಆನೆಗಳನ್ನು ಕಾಡಿಗೆ ಅಟ್ಟಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕೃಷಿಕರು ಧರಣಿ ಸತ್ಯಾಗ್ರಹ ಮಾಡಬೇಕಾದ ಅನಿವಾರ್ಯತೆ ಉಂಟಾಗಬಹುದು ಎಂದು ಬೆಳ್ಳಿಪ್ಪಾಡಿ ಸದಶಿವ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

5 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

20 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago