ದೇಲಂಪಾಡಿ: ಕೇರಳ-ಕರ್ನಾಟಕ ಗಡಿ ಪ್ರದೇಶದಲ್ಲಿ ಜನವಸತಿ ಪ್ರದೇಶದ ಸಮೀಪ 12 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಆರು ಆನೆಗಳ ಎರಡು ಹಿಂಡುಗಳಾಗಿ ಬೀಡು ಬಿಟ್ಟಿದೆ. ಬೆಳ್ಳಿಪ್ಪಾಡಿ ಪ್ರದೇಶದಲ್ಲಿ ಆರು ಆನೆಗಳ ಹಿಂಡು ಮತ್ತು ಮಯ್ಯಾಳ-ನೂಜಿಬೆಟ್ಟು ಪ್ರದೇಶದಲ್ಲಿ ಆರು ಆನೆಗಳು ಬೀಡು ಬಿಟ್ಟಿದ್ದು ಕೃಷಿಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಭೀತಿಯಲ್ಲಿ ದಿನ ಕಳೆಯುವಂತಾಗಿದೆ.
ಬೆಳ್ಳಿಪ್ಪಾಡಿ ಭಾಗದಲ್ಲಿ ವ್ಯಾಪಕ ಕೃಷಿ ಹಾನಿಯನ್ನೂ ಮಾಡಿದೆ. ಆದುದರಿಂದ ಆನೆಗಳನ್ನು ದೂರ ಅಟ್ಟಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಮುಂದಾಳು ಹಾಗೂ ಮುಳಿಯಾರು ವಲಯ ಅಡಿಕೆ ಕೃಷಿಕರ ಸಂರಕ್ಷಣಾ ಸಮಿತಿ ಸಂಚಾಲಕ ಬೆಳ್ಳಿಪ್ಪಾಡಿ ಸದಾಶಿವ ರೈ ಆಗ್ರಹಿಸಿದ್ದಾರೆ. ಕೇರಳದ ದೇಲಂಪಾಡಿ ಮತ್ತು ಕರ್ನಾಟಕದ ಮಂಡೆಕೋಲು ಗ್ರಾಮದಲ್ಲಿ ಹಲವು ವರ್ಷಗಳಿಂದ ಕಾಡಾನೆ ಹಾವಳಿ ಇದ್ದು ಆನೆಗಳು ಕೃಷಿ ನಾಶ ಮಾಡುತಿದೆ. ದೇಲಂಪಾಡಿ ಗ್ರಾಮದಲ್ಲಿ ಆನೆ ಹಾವಳಿಯಿಂದ ಭಾರೀ ಪ್ರಮಾಣದಲ್ಲಿ ಕೃಷಿ ನಾಶ ನಷ್ಟ ಸಂಭವಿಸಿದ್ದರೂ, ಸರಕಾರಕ್ಕೆ ಎಷ್ಟು ಮನವಿಯನ್ನು ಸಮರ್ಪಿಸಿದ್ದರೂ ಯಾವ ಕೃಷಿಕನಿಗೂ ಕೇರಳ ಸರಕಾರದಿಂದ ಯಾವುದೇ ಪರಿಹಾರ ದೊರಕಿರುವುದಿಲ್ಲ ಮತ್ತು ಆನೆ ಹಾವಳಿ ತಡೆಯಲು ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ. ಈ ವರ್ಷ ಧಾರಕಾರವಾಗಿ ಸುರಿದ ಮಳೆಯ ಪ್ರಭಾವದಿಂದ ಅಡಿಕೆ ಮರದ ಫಸಲು ತೀರಾ ಕಡಿಮೆಯಾಗಿದೆ. ಕೃಷಿಕ ತತ್ತರಿಸುತ್ತಿರುವ ವೇಳೆ ಮತ್ತೊಂದೆಡೆ ಆನೆಗಳ ಭೀತಿ ಕಾಡುತ್ತಾ ಇದೆ.
ಅಲ್ಲದೆ ಕಳೆದ ಒಂದು ವಾರದಿಂದ ಪರಪ್ಪ ರಕ್ಷಿತಾರಣ್ಯದ ಬೆಳ್ಳಿಪ್ಪಾಡಿ-ದೇವರಗುಂಡ ಪ್ರದೇಶದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ ಎಂದು ತಿಳಿದು ಬರುತ್ತಿದೆ. ದೇವರಗುಂಡದಲ್ಲಿ ನಾಯಿಯೊಂದನ್ನು ಚಿರತೆಯು ಕೊಂದಿರುವುದನ್ನು ಸ್ಥಳೀಯರು ಖಚಿತಪಡಿಸಿರುತ್ತಾರೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ-ಪರಪ್ಪ ಪ್ರದೇಶದ ನಿವಾಸಿಗಳಾದ ನೂರಕ್ಕೂ ಹೆಚ್ಚು ಮಕ್ಕಳು ಜಾಲ್ಸೂರು-ಸುಳ್ಯದ ವಿವಿಧ ವಿದ್ಯಾಲಯಗಳಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದಾರೆ. ಎಲ್ಲಾ ರಸ್ತೆ-ದಾರಿಗಳು ರಕ್ಷಿತಾರಣ್ಯದ ಮಧ್ಯೆ ಹಾದು ಹೋಗುತ್ತಿದೆ. ಜನರು ರಸ್ತೆಗೆ ಇಳಿಯಲು ಭಯ ಪಡುವ ಸ್ಥಿತಿ ಉಂಟಾಗಿದೆ. ಆದುದರಿಂದ ಆನೆಗಳನ್ನು ಕಾಡಿಗೆ ಅಟ್ಟಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕೃಷಿಕರು ಧರಣಿ ಸತ್ಯಾಗ್ರಹ ಮಾಡಬೇಕಾದ ಅನಿವಾರ್ಯತೆ ಉಂಟಾಗಬಹುದು ಎಂದು ಬೆಳ್ಳಿಪ್ಪಾಡಿ ಸದಶಿವ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…