ಮಂಗಳೂರು : ಕೇರಳ ರಾಜ್ಯ ಕಾಸರಗೋಡು ಜಿಲ್ಲೆಯಿಂದ ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇಲ್ಲಿಗೆ ಬಂದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
ತಸ್ಲೀಮ ಎಂಬವರು ಎ.8 ರಂದು ಮಧ್ಯಾಹ್ನ 12.15 ಗಂಟೆಗೆ ತೀವ್ರವಾದ ತಲೆನೋವಿನ ಸಂಬಂಧ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಹಿಂದಿರುಗಿರುತ್ತಾರೆ. ಎರಡನೇ ಪ್ರಕರಣದಲ್ಲಿ ಬಿ. ಫಾತಿಮ (65) ಎಂಬ ಮಹಿಳೆ ಏ.8 ರಂದು ಮಧ್ಯಾಹ್ನ 12.50 ಗಂಟೆಗೆ ಹೃದಯ ಸಂಬಂಧಿ ಖಾಯಿಲೆಗೆ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಮೂರನೇ ಪ್ರಕರಣದಲ್ಲಿ ರೀಶಾನ ತೀವ್ರವಾದ ಹೊಟ್ಟೆನೋವಿಗೆ ಸಂಬಂಧಿಸಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು ಹಿಂದಿರುಗಿರುತ್ತಾರೆ.
ನಾಭಿ ಎಂಬ ಮಹಿಳೆ ತಲೆನೋವು ಮತ್ತು ವಾಂತಿ ಇರುವ ಕಾರಣ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಬಂದು ಚಿಕಿತ್ಸೆಗಾಗಿ ದಾಖಲಾಗಲು ಸೂಚಿಸಿದ್ದರೂ ಅದನ್ನು ನಿರಾಕರಿಸಿ ಹಿಂದಿರುಗಿರುತ್ತಾರೆ.
ಈ ಎಲ್ಲಾ ಪ್ರಕರಣಗಳು ಕೋವಿಡ್- 19 ಗೆ ಸಂಬಂಧಪಟ್ಟಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ದ.ಕ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…
ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…
ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ ಮೂರು ದಿನಗಳ…
ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…
24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…