ಮಂಗಳೂರು : ಕೇರಳ ರಾಜ್ಯ ಕಾಸರಗೋಡು ಜಿಲ್ಲೆಯಿಂದ ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇಲ್ಲಿಗೆ ಬಂದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
ತಸ್ಲೀಮ ಎಂಬವರು ಎ.8 ರಂದು ಮಧ್ಯಾಹ್ನ 12.15 ಗಂಟೆಗೆ ತೀವ್ರವಾದ ತಲೆನೋವಿನ ಸಂಬಂಧ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಹಿಂದಿರುಗಿರುತ್ತಾರೆ. ಎರಡನೇ ಪ್ರಕರಣದಲ್ಲಿ ಬಿ. ಫಾತಿಮ (65) ಎಂಬ ಮಹಿಳೆ ಏ.8 ರಂದು ಮಧ್ಯಾಹ್ನ 12.50 ಗಂಟೆಗೆ ಹೃದಯ ಸಂಬಂಧಿ ಖಾಯಿಲೆಗೆ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಮೂರನೇ ಪ್ರಕರಣದಲ್ಲಿ ರೀಶಾನ ತೀವ್ರವಾದ ಹೊಟ್ಟೆನೋವಿಗೆ ಸಂಬಂಧಿಸಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು ಹಿಂದಿರುಗಿರುತ್ತಾರೆ.
ನಾಭಿ ಎಂಬ ಮಹಿಳೆ ತಲೆನೋವು ಮತ್ತು ವಾಂತಿ ಇರುವ ಕಾರಣ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಬಂದು ಚಿಕಿತ್ಸೆಗಾಗಿ ದಾಖಲಾಗಲು ಸೂಚಿಸಿದ್ದರೂ ಅದನ್ನು ನಿರಾಕರಿಸಿ ಹಿಂದಿರುಗಿರುತ್ತಾರೆ.
ಈ ಎಲ್ಲಾ ಪ್ರಕರಣಗಳು ಕೋವಿಡ್- 19 ಗೆ ಸಂಬಂಧಪಟ್ಟಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ದ.ಕ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…
ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…
ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ (Artificial Intelligence) AI)ಮೂಲಕ…