ಮಂಗಳೂರು : ಕೇರಳ ರಾಜ್ಯ ಕಾಸರಗೋಡು ಜಿಲ್ಲೆಯಿಂದ ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇಲ್ಲಿಗೆ ಬಂದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
ತಸ್ಲೀಮ ಎಂಬವರು ಎ.8 ರಂದು ಮಧ್ಯಾಹ್ನ 12.15 ಗಂಟೆಗೆ ತೀವ್ರವಾದ ತಲೆನೋವಿನ ಸಂಬಂಧ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಹಿಂದಿರುಗಿರುತ್ತಾರೆ. ಎರಡನೇ ಪ್ರಕರಣದಲ್ಲಿ ಬಿ. ಫಾತಿಮ (65) ಎಂಬ ಮಹಿಳೆ ಏ.8 ರಂದು ಮಧ್ಯಾಹ್ನ 12.50 ಗಂಟೆಗೆ ಹೃದಯ ಸಂಬಂಧಿ ಖಾಯಿಲೆಗೆ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಮೂರನೇ ಪ್ರಕರಣದಲ್ಲಿ ರೀಶಾನ ತೀವ್ರವಾದ ಹೊಟ್ಟೆನೋವಿಗೆ ಸಂಬಂಧಿಸಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು ಹಿಂದಿರುಗಿರುತ್ತಾರೆ.
ನಾಭಿ ಎಂಬ ಮಹಿಳೆ ತಲೆನೋವು ಮತ್ತು ವಾಂತಿ ಇರುವ ಕಾರಣ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಬಂದು ಚಿಕಿತ್ಸೆಗಾಗಿ ದಾಖಲಾಗಲು ಸೂಚಿಸಿದ್ದರೂ ಅದನ್ನು ನಿರಾಕರಿಸಿ ಹಿಂದಿರುಗಿರುತ್ತಾರೆ.
ಈ ಎಲ್ಲಾ ಪ್ರಕರಣಗಳು ಕೋವಿಡ್- 19 ಗೆ ಸಂಬಂಧಪಟ್ಟಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ದ.ಕ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…
ಗಲ್ಫ್ ಯುದ್ಧದಿಂದ ಭಾರತದ ₹11.8 ಬಿಲಿಯನ್ ಕೃಷಿ-ಆಹಾರ ರಫ್ತು ಅಪಾಯದಲ್ಲಿದೆ. ಸಾಗಾಟ ಅಡಚಣೆ…
ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ…
ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…