ಮಂಗಳೂರು : ಕೇರಳ ರಾಜ್ಯ ಕಾಸರಗೋಡು ಜಿಲ್ಲೆಯಿಂದ ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇಲ್ಲಿಗೆ ಬಂದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
ತಸ್ಲೀಮ ಎಂಬವರು ಎ.8 ರಂದು ಮಧ್ಯಾಹ್ನ 12.15 ಗಂಟೆಗೆ ತೀವ್ರವಾದ ತಲೆನೋವಿನ ಸಂಬಂಧ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಹಿಂದಿರುಗಿರುತ್ತಾರೆ. ಎರಡನೇ ಪ್ರಕರಣದಲ್ಲಿ ಬಿ. ಫಾತಿಮ (65) ಎಂಬ ಮಹಿಳೆ ಏ.8 ರಂದು ಮಧ್ಯಾಹ್ನ 12.50 ಗಂಟೆಗೆ ಹೃದಯ ಸಂಬಂಧಿ ಖಾಯಿಲೆಗೆ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಮೂರನೇ ಪ್ರಕರಣದಲ್ಲಿ ರೀಶಾನ ತೀವ್ರವಾದ ಹೊಟ್ಟೆನೋವಿಗೆ ಸಂಬಂಧಿಸಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು ಹಿಂದಿರುಗಿರುತ್ತಾರೆ.
ನಾಭಿ ಎಂಬ ಮಹಿಳೆ ತಲೆನೋವು ಮತ್ತು ವಾಂತಿ ಇರುವ ಕಾರಣ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಬಂದು ಚಿಕಿತ್ಸೆಗಾಗಿ ದಾಖಲಾಗಲು ಸೂಚಿಸಿದ್ದರೂ ಅದನ್ನು ನಿರಾಕರಿಸಿ ಹಿಂದಿರುಗಿರುತ್ತಾರೆ.
ಈ ಎಲ್ಲಾ ಪ್ರಕರಣಗಳು ಕೋವಿಡ್- 19 ಗೆ ಸಂಬಂಧಪಟ್ಟಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ದ.ಕ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…