ಮಂಗಳೂರು : ಕೇರಳ ರಾಜ್ಯ ಕಾಸರಗೋಡು ಜಿಲ್ಲೆಯಿಂದ ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇಲ್ಲಿಗೆ ಬಂದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
ತಸ್ಲೀಮ ಎಂಬವರು ಎ.8 ರಂದು ಮಧ್ಯಾಹ್ನ 12.15 ಗಂಟೆಗೆ ತೀವ್ರವಾದ ತಲೆನೋವಿನ ಸಂಬಂಧ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಹಿಂದಿರುಗಿರುತ್ತಾರೆ. ಎರಡನೇ ಪ್ರಕರಣದಲ್ಲಿ ಬಿ. ಫಾತಿಮ (65) ಎಂಬ ಮಹಿಳೆ ಏ.8 ರಂದು ಮಧ್ಯಾಹ್ನ 12.50 ಗಂಟೆಗೆ ಹೃದಯ ಸಂಬಂಧಿ ಖಾಯಿಲೆಗೆ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಮೂರನೇ ಪ್ರಕರಣದಲ್ಲಿ ರೀಶಾನ ತೀವ್ರವಾದ ಹೊಟ್ಟೆನೋವಿಗೆ ಸಂಬಂಧಿಸಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು ಹಿಂದಿರುಗಿರುತ್ತಾರೆ.
ನಾಭಿ ಎಂಬ ಮಹಿಳೆ ತಲೆನೋವು ಮತ್ತು ವಾಂತಿ ಇರುವ ಕಾರಣ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಬಂದು ಚಿಕಿತ್ಸೆಗಾಗಿ ದಾಖಲಾಗಲು ಸೂಚಿಸಿದ್ದರೂ ಅದನ್ನು ನಿರಾಕರಿಸಿ ಹಿಂದಿರುಗಿರುತ್ತಾರೆ.
ಈ ಎಲ್ಲಾ ಪ್ರಕರಣಗಳು ಕೋವಿಡ್- 19 ಗೆ ಸಂಬಂಧಪಟ್ಟಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ದ.ಕ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…