ಮಂಗಳೂರು : ಕೇರಳ ರಾಜ್ಯ ಕಾಸರಗೋಡು ಜಿಲ್ಲೆಯಿಂದ ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇಲ್ಲಿಗೆ ಬಂದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
ತಸ್ಲೀಮ ಎಂಬವರು ಎ.8 ರಂದು ಮಧ್ಯಾಹ್ನ 12.15 ಗಂಟೆಗೆ ತೀವ್ರವಾದ ತಲೆನೋವಿನ ಸಂಬಂಧ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಹಿಂದಿರುಗಿರುತ್ತಾರೆ. ಎರಡನೇ ಪ್ರಕರಣದಲ್ಲಿ ಬಿ. ಫಾತಿಮ (65) ಎಂಬ ಮಹಿಳೆ ಏ.8 ರಂದು ಮಧ್ಯಾಹ್ನ 12.50 ಗಂಟೆಗೆ ಹೃದಯ ಸಂಬಂಧಿ ಖಾಯಿಲೆಗೆ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಮೂರನೇ ಪ್ರಕರಣದಲ್ಲಿ ರೀಶಾನ ತೀವ್ರವಾದ ಹೊಟ್ಟೆನೋವಿಗೆ ಸಂಬಂಧಿಸಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು ಹಿಂದಿರುಗಿರುತ್ತಾರೆ.
ನಾಭಿ ಎಂಬ ಮಹಿಳೆ ತಲೆನೋವು ಮತ್ತು ವಾಂತಿ ಇರುವ ಕಾರಣ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಬಂದು ಚಿಕಿತ್ಸೆಗಾಗಿ ದಾಖಲಾಗಲು ಸೂಚಿಸಿದ್ದರೂ ಅದನ್ನು ನಿರಾಕರಿಸಿ ಹಿಂದಿರುಗಿರುತ್ತಾರೆ.
ಈ ಎಲ್ಲಾ ಪ್ರಕರಣಗಳು ಕೋವಿಡ್- 19 ಗೆ ಸಂಬಂಧಪಟ್ಟಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ದ.ಕ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…