ಮಂಗಳೂರು : ಕೇರಳ ರಾಜ್ಯ ಕಾಸರಗೋಡು ಜಿಲ್ಲೆಯಿಂದ ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇಲ್ಲಿಗೆ ಬಂದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
ತಸ್ಲೀಮ ಎಂಬವರು ಎ.8 ರಂದು ಮಧ್ಯಾಹ್ನ 12.15 ಗಂಟೆಗೆ ತೀವ್ರವಾದ ತಲೆನೋವಿನ ಸಂಬಂಧ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಹಿಂದಿರುಗಿರುತ್ತಾರೆ. ಎರಡನೇ ಪ್ರಕರಣದಲ್ಲಿ ಬಿ. ಫಾತಿಮ (65) ಎಂಬ ಮಹಿಳೆ ಏ.8 ರಂದು ಮಧ್ಯಾಹ್ನ 12.50 ಗಂಟೆಗೆ ಹೃದಯ ಸಂಬಂಧಿ ಖಾಯಿಲೆಗೆ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಮೂರನೇ ಪ್ರಕರಣದಲ್ಲಿ ರೀಶಾನ ತೀವ್ರವಾದ ಹೊಟ್ಟೆನೋವಿಗೆ ಸಂಬಂಧಿಸಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು ಹಿಂದಿರುಗಿರುತ್ತಾರೆ.
ನಾಭಿ ಎಂಬ ಮಹಿಳೆ ತಲೆನೋವು ಮತ್ತು ವಾಂತಿ ಇರುವ ಕಾರಣ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಬಂದು ಚಿಕಿತ್ಸೆಗಾಗಿ ದಾಖಲಾಗಲು ಸೂಚಿಸಿದ್ದರೂ ಅದನ್ನು ನಿರಾಕರಿಸಿ ಹಿಂದಿರುಗಿರುತ್ತಾರೆ.
ಈ ಎಲ್ಲಾ ಪ್ರಕರಣಗಳು ಕೋವಿಡ್- 19 ಗೆ ಸಂಬಂಧಪಟ್ಟಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ದ.ಕ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…