ಕೊಚ್ಚಿ: ಕೇರಳ ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಮಂಜೇಶ್ವರ ಕ್ಷೇತ್ರದ ಯುಡಿಎಫ್ ಶಾಸಕ ಎಂ. ಸಿ ಕಮರುದ್ದೀನ್ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ ಕನ್ನಡಿಗರ ಗಮನ ಸೆಳೆದಿದ್ದಾರೆ.
ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಎಂ.ಸಿ ಕಮರುದ್ದೀನ್ ಚೊಚ್ಚಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಆಯ್ಕೆಯಾದ ಐವರು ನೂತನ ಶಾಸಕರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.
ವಿ.ಕೆ.ಪ್ರಶಾಂತ್, ಕೆ.ಯು.ಜೆನಿಶ್ ಕುಮಾರ್, ಟಿ.ಜೆ.ವಿನೋದ್, ಶನಿಮೋಲ್ ಉಸ್ಮಾನ್ ಮತ್ತು ಕಮರುದ್ದೀನ್ ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ಅವರ ಸಮ್ಮುಖದಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಮರುದ್ದೀನ್ ಅವರು ಕನ್ನಡದಲ್ಲಿ ಹಾಗೂ ಇತರ ನಾಲ್ವರು ಶಾಸಕರು ಮಲಯಾಳಂ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಗಡಿ ಜಿಲ್ಲೆ ದಕ್ಷಿಣ ಕನ್ನಡ ಮತ್ತು ಇಡೀ ರಾಜ್ಯದ ಕನ್ನಡಿಗರು ಹೆಮ್ಮೆ ಪಡುವಂತೆ ಮಾಡಿದ್ದಾರೆ.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…