ಕೊಚ್ಚಿ: ಕೇರಳ ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಮಂಜೇಶ್ವರ ಕ್ಷೇತ್ರದ ಯುಡಿಎಫ್ ಶಾಸಕ ಎಂ. ಸಿ ಕಮರುದ್ದೀನ್ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ ಕನ್ನಡಿಗರ ಗಮನ ಸೆಳೆದಿದ್ದಾರೆ.
ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಎಂ.ಸಿ ಕಮರುದ್ದೀನ್ ಚೊಚ್ಚಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಆಯ್ಕೆಯಾದ ಐವರು ನೂತನ ಶಾಸಕರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.
ವಿ.ಕೆ.ಪ್ರಶಾಂತ್, ಕೆ.ಯು.ಜೆನಿಶ್ ಕುಮಾರ್, ಟಿ.ಜೆ.ವಿನೋದ್, ಶನಿಮೋಲ್ ಉಸ್ಮಾನ್ ಮತ್ತು ಕಮರುದ್ದೀನ್ ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ಅವರ ಸಮ್ಮುಖದಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಮರುದ್ದೀನ್ ಅವರು ಕನ್ನಡದಲ್ಲಿ ಹಾಗೂ ಇತರ ನಾಲ್ವರು ಶಾಸಕರು ಮಲಯಾಳಂ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಗಡಿ ಜಿಲ್ಲೆ ದಕ್ಷಿಣ ಕನ್ನಡ ಮತ್ತು ಇಡೀ ರಾಜ್ಯದ ಕನ್ನಡಿಗರು ಹೆಮ್ಮೆ ಪಡುವಂತೆ ಮಾಡಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…