Advertisement
ಸುದ್ದಿಗಳು

ಕೇರ್ಪಡ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ನಡೆದ ‘ಅಮ್ಮನೆಡೆ ನಮ್ಮ ನಡೆ’

Share

ನಿಂತಿಕಲ್ಲು : ಮಾತೃ ಶಕ್ತಿ ಮತ್ತು ಯುವ ಶಕ್ತಿ ಒಂದಾಗಿ ಧರ್ಮದ ಉಳಿವಿಗೆ ಕೈಜೋಡಿಸಬೇಕು. ಧರ್ಮದ ಜಾಗೃತಿಯ ಜೊತೆ ಸಮಾಜದ ಜಾಗೃತಿಯೂ ಅಗತ್ಯವಾಗಿದ್ದು, ಅಂತರ್ಜಾಲದ ಮೋಹಕ್ಕೆ ಬಲಿಯಾಗಿ ದಾರಿ ತಪ್ಪುವ ಬದಲು ಧಾರ್ಮಿಕ ಮೋಹದಿಂದ ಬದುಕು ಹಸನಾಗಿಸಿಕೊಳ್ಳುವುದೇ ಶ್ರೇಷ್ಠ ಕಾರ್ಯ ಎಂದು ಕರಿಂಜೆ ಶ್ರೀ ಲಕ್ಷ್ಮೀ ಸತ್ಯನಾರಾಯಣ ವೀರಾಂಜನೇಯ ಸ್ವಾಮಿ ದೇವಸ್ಥಾನದ ಮುಕ್ತಾನಂದ ಸ್ವಾಮೀಜಿ ನುಡಿದರು.

ಕೇರ್ಪಡ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ನಡೆದ ‘ಅಮ್ಮನೆಡೆ ನಮ್ಮ ನಡೆ’ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಅವರು ಅಶೀರ್ವಚನ ನೀಡಿದರು. ದೇವಸ್ಥಾನದ ಗರ್ಭಗುಡಿಯಲ್ಲಿರುವ ದೇವರನ್ನು ಮಾತ್ರ ಪೂಜಿಸಿದರೆ ಸಾಲದು, ದೇವರಿಗೆ ಸಮಾನಳಾದ ತಾಯಿಯನ್ನು ಮನೆಯಲ್ಲಿ ಪ್ರತಿದಿನ ಪೂಜಿಸುವಂತಾಗಬೇಕು. ಮಕ್ಕಳನ್ನು ವಿಕೃತಿ ಭಾವನೆಗಳಿಂದ ತಪ್ಪಿಸಿ ಅವರಿಗೆ ಸುಸಂಸ್ಕೃತ ಜೀವನ ನಡೆಸುವುದನ್ನು ಕಲಿಸಬೇಕು. ಅಮ್ಮನೆಡೆ ನಮ್ಮ ನಡೆ ಅರ್ಥಪೂರ್ಣವಾಗಿದ್ದು, ದೇವರ ಸಾನಿಧ್ಯಕ್ಕೆ ಭಕ್ತರು ನಡೆದು ಬರುವುದು ವೈಶಿಷ್ಟ್ಯಪೂರ್ಣ ಕಾರ್ಯಕ್ರಮ ಎಂದು ಸ್ವಾಮೀಜಿ ಹೇಳಿದರು.

ಕಡಬ ಸರಸ್ವತಿ ವಿದ್ಯಾ ಸಂಸ್ಥೆಯ ಸಂಚಾಲಕ ವೆಂಕಟ್ರಮಣ ಭಟ್ ಧಾರ್ಮಿಕ ಉಪನ್ಯಾಸ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಕ್ಷಯ ಆಳ್ವ ಪಿ.ಡಿ ಅಧ್ಯಕ್ಷತೆ ವಹಿಸಿದ್ದರು. ನಿಂತಿಕಲ್ಲು ಕೆ.ಎಸ್ ಗೌಡ ವಿದ್ಯಾ ಸಂಸ್ಥೆಯ ನಿರ್ದೇಶಕ ಕುಮಾರಸ್ವಾಮಿ ಕೆ.ಎಸ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ವಸಂತ ನಡುಬೈಲು, ತಾ.ಪಂ. ಮಾಜಿ ಸದಸ್ಯೆ ಭಾಗ್ಯ ಪ್ರಸನ್ನ, ಪ್ರಗತಿಪರ ಕೃಷಿಕ ಪದ್ಮನಾಭ ರೈ ಎಂಜೀರು, ವಿಶೇಷ ಪಾದಯಾತ್ರೆ ಸಂಚಾಲಕ ರಘುನಾಥ ರೈ ಅಲೆಂಗಾರ ಉಪಸ್ಥಿತರಿದ್ದರು. ರಘುನಾಥ ರೈ ಸ್ವಾಗತಿಸಿದರು. ಪ್ರದೀಪ್ ರೈ ಎಣ್ಮೂರು ಕಾರ್ಯಕ್ರಮ ನಿರೂಪಿಸಿದರು.

ಅಮ್ಮನಡೆ ನಮ್ಮ ನಡೆ ಕಾರ್ಯಕ್ರಮದ ಅಂಗವಾಗಿ ಎಣ್ಮೂರು ಭಜನಾ ಮಂದಿರದಿಂದ ದೇವಸ್ಥಾನದವರೆಗೆ ಆಕರ್ಷಕ ಪಾದಯಾತ್ರೆ ನಡೆಯಿತು. ಎಣ್ಮೂರು ಕೋಟಿ ಚೆನ್ನಯ ನಗರದ ಸೀತಾರಾಮಾಂಜನೇಯ ಭಜನಾ ಮಂದಿರದಲ್ಲಿ ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು ಮತ್ತು ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಜಯಸೂರ್ಯ ರೈ ಪಾದಾಯಾತ್ರೆ ಉದ್ಘಾಟಿಸಿದರು.

ಪ್ರಗತಿ ಶಾಲೆಯ ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ ಭಜನೆ, ಶ್ರೀ ಕಪಿಲೇಶ್ವರ ಸಿಂಗಾರಿ ಮೇಳದವರಿಂದ ಆಕರ್ಷಕ ಚೆಂಡೆ ಪ್ರದರ್ಶನ, ಹತ್ತಕ್ಕೂ ಅಧಿಕ ಹುಲಿವೇಷದ ಕುಣಿತದೊಂದಿಗೆ ಎಣ್ಮೂರು ಭಜನಾ ಮಂದಿರದಿಂದ ಸಾಗಿ ನಿಂತಿಕಲ್ಲು ಪೇಟೆ, ಅಲೆಕ್ಕಾಡಿ ಮಾರ್ಗವಾಗಿ ಕೇರ್ಪಡ ದೇವಸ್ಥಾನದವರೆಗೆ ಜಾಥಾ ನಡೆಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

22 minutes ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

32 minutes ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

8 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

9 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

18 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

19 hours ago