Advertisement
ಸುದ್ದಿಗಳು

ಕೇರ್ಪಡ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ನಡೆದ ‘ಅಮ್ಮನೆಡೆ ನಮ್ಮ ನಡೆ’

Share

ನಿಂತಿಕಲ್ಲು : ಮಾತೃ ಶಕ್ತಿ ಮತ್ತು ಯುವ ಶಕ್ತಿ ಒಂದಾಗಿ ಧರ್ಮದ ಉಳಿವಿಗೆ ಕೈಜೋಡಿಸಬೇಕು. ಧರ್ಮದ ಜಾಗೃತಿಯ ಜೊತೆ ಸಮಾಜದ ಜಾಗೃತಿಯೂ ಅಗತ್ಯವಾಗಿದ್ದು, ಅಂತರ್ಜಾಲದ ಮೋಹಕ್ಕೆ ಬಲಿಯಾಗಿ ದಾರಿ ತಪ್ಪುವ ಬದಲು ಧಾರ್ಮಿಕ ಮೋಹದಿಂದ ಬದುಕು ಹಸನಾಗಿಸಿಕೊಳ್ಳುವುದೇ ಶ್ರೇಷ್ಠ ಕಾರ್ಯ ಎಂದು ಕರಿಂಜೆ ಶ್ರೀ ಲಕ್ಷ್ಮೀ ಸತ್ಯನಾರಾಯಣ ವೀರಾಂಜನೇಯ ಸ್ವಾಮಿ ದೇವಸ್ಥಾನದ ಮುಕ್ತಾನಂದ ಸ್ವಾಮೀಜಿ ನುಡಿದರು.

ಕೇರ್ಪಡ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ನಡೆದ ‘ಅಮ್ಮನೆಡೆ ನಮ್ಮ ನಡೆ’ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಅವರು ಅಶೀರ್ವಚನ ನೀಡಿದರು. ದೇವಸ್ಥಾನದ ಗರ್ಭಗುಡಿಯಲ್ಲಿರುವ ದೇವರನ್ನು ಮಾತ್ರ ಪೂಜಿಸಿದರೆ ಸಾಲದು, ದೇವರಿಗೆ ಸಮಾನಳಾದ ತಾಯಿಯನ್ನು ಮನೆಯಲ್ಲಿ ಪ್ರತಿದಿನ ಪೂಜಿಸುವಂತಾಗಬೇಕು. ಮಕ್ಕಳನ್ನು ವಿಕೃತಿ ಭಾವನೆಗಳಿಂದ ತಪ್ಪಿಸಿ ಅವರಿಗೆ ಸುಸಂಸ್ಕೃತ ಜೀವನ ನಡೆಸುವುದನ್ನು ಕಲಿಸಬೇಕು. ಅಮ್ಮನೆಡೆ ನಮ್ಮ ನಡೆ ಅರ್ಥಪೂರ್ಣವಾಗಿದ್ದು, ದೇವರ ಸಾನಿಧ್ಯಕ್ಕೆ ಭಕ್ತರು ನಡೆದು ಬರುವುದು ವೈಶಿಷ್ಟ್ಯಪೂರ್ಣ ಕಾರ್ಯಕ್ರಮ ಎಂದು ಸ್ವಾಮೀಜಿ ಹೇಳಿದರು.

ಕಡಬ ಸರಸ್ವತಿ ವಿದ್ಯಾ ಸಂಸ್ಥೆಯ ಸಂಚಾಲಕ ವೆಂಕಟ್ರಮಣ ಭಟ್ ಧಾರ್ಮಿಕ ಉಪನ್ಯಾಸ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಕ್ಷಯ ಆಳ್ವ ಪಿ.ಡಿ ಅಧ್ಯಕ್ಷತೆ ವಹಿಸಿದ್ದರು. ನಿಂತಿಕಲ್ಲು ಕೆ.ಎಸ್ ಗೌಡ ವಿದ್ಯಾ ಸಂಸ್ಥೆಯ ನಿರ್ದೇಶಕ ಕುಮಾರಸ್ವಾಮಿ ಕೆ.ಎಸ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ವಸಂತ ನಡುಬೈಲು, ತಾ.ಪಂ. ಮಾಜಿ ಸದಸ್ಯೆ ಭಾಗ್ಯ ಪ್ರಸನ್ನ, ಪ್ರಗತಿಪರ ಕೃಷಿಕ ಪದ್ಮನಾಭ ರೈ ಎಂಜೀರು, ವಿಶೇಷ ಪಾದಯಾತ್ರೆ ಸಂಚಾಲಕ ರಘುನಾಥ ರೈ ಅಲೆಂಗಾರ ಉಪಸ್ಥಿತರಿದ್ದರು. ರಘುನಾಥ ರೈ ಸ್ವಾಗತಿಸಿದರು. ಪ್ರದೀಪ್ ರೈ ಎಣ್ಮೂರು ಕಾರ್ಯಕ್ರಮ ನಿರೂಪಿಸಿದರು.

ಅಮ್ಮನಡೆ ನಮ್ಮ ನಡೆ ಕಾರ್ಯಕ್ರಮದ ಅಂಗವಾಗಿ ಎಣ್ಮೂರು ಭಜನಾ ಮಂದಿರದಿಂದ ದೇವಸ್ಥಾನದವರೆಗೆ ಆಕರ್ಷಕ ಪಾದಯಾತ್ರೆ ನಡೆಯಿತು. ಎಣ್ಮೂರು ಕೋಟಿ ಚೆನ್ನಯ ನಗರದ ಸೀತಾರಾಮಾಂಜನೇಯ ಭಜನಾ ಮಂದಿರದಲ್ಲಿ ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು ಮತ್ತು ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಜಯಸೂರ್ಯ ರೈ ಪಾದಾಯಾತ್ರೆ ಉದ್ಘಾಟಿಸಿದರು.

ಪ್ರಗತಿ ಶಾಲೆಯ ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ ಭಜನೆ, ಶ್ರೀ ಕಪಿಲೇಶ್ವರ ಸಿಂಗಾರಿ ಮೇಳದವರಿಂದ ಆಕರ್ಷಕ ಚೆಂಡೆ ಪ್ರದರ್ಶನ, ಹತ್ತಕ್ಕೂ ಅಧಿಕ ಹುಲಿವೇಷದ ಕುಣಿತದೊಂದಿಗೆ ಎಣ್ಮೂರು ಭಜನಾ ಮಂದಿರದಿಂದ ಸಾಗಿ ನಿಂತಿಕಲ್ಲು ಪೇಟೆ, ಅಲೆಕ್ಕಾಡಿ ಮಾರ್ಗವಾಗಿ ಕೇರ್ಪಡ ದೇವಸ್ಥಾನದವರೆಗೆ ಜಾಥಾ ನಡೆಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

6 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

6 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

6 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

6 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

16 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

17 hours ago