Advertisement
ಸುದ್ದಿಗಳು

ಕೇರ್ಪಡ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ನಡೆದ ‘ಅಮ್ಮನೆಡೆ ನಮ್ಮ ನಡೆ’

Share

ನಿಂತಿಕಲ್ಲು : ಮಾತೃ ಶಕ್ತಿ ಮತ್ತು ಯುವ ಶಕ್ತಿ ಒಂದಾಗಿ ಧರ್ಮದ ಉಳಿವಿಗೆ ಕೈಜೋಡಿಸಬೇಕು. ಧರ್ಮದ ಜಾಗೃತಿಯ ಜೊತೆ ಸಮಾಜದ ಜಾಗೃತಿಯೂ ಅಗತ್ಯವಾಗಿದ್ದು, ಅಂತರ್ಜಾಲದ ಮೋಹಕ್ಕೆ ಬಲಿಯಾಗಿ ದಾರಿ ತಪ್ಪುವ ಬದಲು ಧಾರ್ಮಿಕ ಮೋಹದಿಂದ ಬದುಕು ಹಸನಾಗಿಸಿಕೊಳ್ಳುವುದೇ ಶ್ರೇಷ್ಠ ಕಾರ್ಯ ಎಂದು ಕರಿಂಜೆ ಶ್ರೀ ಲಕ್ಷ್ಮೀ ಸತ್ಯನಾರಾಯಣ ವೀರಾಂಜನೇಯ ಸ್ವಾಮಿ ದೇವಸ್ಥಾನದ ಮುಕ್ತಾನಂದ ಸ್ವಾಮೀಜಿ ನುಡಿದರು.

ಕೇರ್ಪಡ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ನಡೆದ ‘ಅಮ್ಮನೆಡೆ ನಮ್ಮ ನಡೆ’ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಅವರು ಅಶೀರ್ವಚನ ನೀಡಿದರು. ದೇವಸ್ಥಾನದ ಗರ್ಭಗುಡಿಯಲ್ಲಿರುವ ದೇವರನ್ನು ಮಾತ್ರ ಪೂಜಿಸಿದರೆ ಸಾಲದು, ದೇವರಿಗೆ ಸಮಾನಳಾದ ತಾಯಿಯನ್ನು ಮನೆಯಲ್ಲಿ ಪ್ರತಿದಿನ ಪೂಜಿಸುವಂತಾಗಬೇಕು. ಮಕ್ಕಳನ್ನು ವಿಕೃತಿ ಭಾವನೆಗಳಿಂದ ತಪ್ಪಿಸಿ ಅವರಿಗೆ ಸುಸಂಸ್ಕೃತ ಜೀವನ ನಡೆಸುವುದನ್ನು ಕಲಿಸಬೇಕು. ಅಮ್ಮನೆಡೆ ನಮ್ಮ ನಡೆ ಅರ್ಥಪೂರ್ಣವಾಗಿದ್ದು, ದೇವರ ಸಾನಿಧ್ಯಕ್ಕೆ ಭಕ್ತರು ನಡೆದು ಬರುವುದು ವೈಶಿಷ್ಟ್ಯಪೂರ್ಣ ಕಾರ್ಯಕ್ರಮ ಎಂದು ಸ್ವಾಮೀಜಿ ಹೇಳಿದರು.

ಕಡಬ ಸರಸ್ವತಿ ವಿದ್ಯಾ ಸಂಸ್ಥೆಯ ಸಂಚಾಲಕ ವೆಂಕಟ್ರಮಣ ಭಟ್ ಧಾರ್ಮಿಕ ಉಪನ್ಯಾಸ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಕ್ಷಯ ಆಳ್ವ ಪಿ.ಡಿ ಅಧ್ಯಕ್ಷತೆ ವಹಿಸಿದ್ದರು. ನಿಂತಿಕಲ್ಲು ಕೆ.ಎಸ್ ಗೌಡ ವಿದ್ಯಾ ಸಂಸ್ಥೆಯ ನಿರ್ದೇಶಕ ಕುಮಾರಸ್ವಾಮಿ ಕೆ.ಎಸ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ವಸಂತ ನಡುಬೈಲು, ತಾ.ಪಂ. ಮಾಜಿ ಸದಸ್ಯೆ ಭಾಗ್ಯ ಪ್ರಸನ್ನ, ಪ್ರಗತಿಪರ ಕೃಷಿಕ ಪದ್ಮನಾಭ ರೈ ಎಂಜೀರು, ವಿಶೇಷ ಪಾದಯಾತ್ರೆ ಸಂಚಾಲಕ ರಘುನಾಥ ರೈ ಅಲೆಂಗಾರ ಉಪಸ್ಥಿತರಿದ್ದರು. ರಘುನಾಥ ರೈ ಸ್ವಾಗತಿಸಿದರು. ಪ್ರದೀಪ್ ರೈ ಎಣ್ಮೂರು ಕಾರ್ಯಕ್ರಮ ನಿರೂಪಿಸಿದರು.

ಅಮ್ಮನಡೆ ನಮ್ಮ ನಡೆ ಕಾರ್ಯಕ್ರಮದ ಅಂಗವಾಗಿ ಎಣ್ಮೂರು ಭಜನಾ ಮಂದಿರದಿಂದ ದೇವಸ್ಥಾನದವರೆಗೆ ಆಕರ್ಷಕ ಪಾದಯಾತ್ರೆ ನಡೆಯಿತು. ಎಣ್ಮೂರು ಕೋಟಿ ಚೆನ್ನಯ ನಗರದ ಸೀತಾರಾಮಾಂಜನೇಯ ಭಜನಾ ಮಂದಿರದಲ್ಲಿ ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು ಮತ್ತು ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಜಯಸೂರ್ಯ ರೈ ಪಾದಾಯಾತ್ರೆ ಉದ್ಘಾಟಿಸಿದರು.

ಪ್ರಗತಿ ಶಾಲೆಯ ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ ಭಜನೆ, ಶ್ರೀ ಕಪಿಲೇಶ್ವರ ಸಿಂಗಾರಿ ಮೇಳದವರಿಂದ ಆಕರ್ಷಕ ಚೆಂಡೆ ಪ್ರದರ್ಶನ, ಹತ್ತಕ್ಕೂ ಅಧಿಕ ಹುಲಿವೇಷದ ಕುಣಿತದೊಂದಿಗೆ ಎಣ್ಮೂರು ಭಜನಾ ಮಂದಿರದಿಂದ ಸಾಗಿ ನಿಂತಿಕಲ್ಲು ಪೇಟೆ, ಅಲೆಕ್ಕಾಡಿ ಮಾರ್ಗವಾಗಿ ಕೇರ್ಪಡ ದೇವಸ್ಥಾನದವರೆಗೆ ಜಾಥಾ ನಡೆಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago