ಸುದ್ದಿಗಳು

ಕೇರ್ಪಳದ ಹಿಂದೂ ರುದ್ರಭೂಮಿಯಲ್ಲಿ ಕಸ- ಸ್ಥಳೀಯರ ವಿರೋಧ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸುಳ್ಯ ನಗರ ಪಂಚಾಯತ್ ಮುಂಭಾಗದ ಕಟ್ಟಡದಲ್ಲಿ ತುಂಬಿಡಲಾಗಿರುವ ಕಸದಿಂದ ಒಂದು ಲೋಡನ್ನು ಕೇರ್ಪಳದ ಹಿಂದೂ ರುದ್ರಭೂಮಿಯಲ್ಲಿ ತಂದು ಸುರಿದಿರುವುದು ವಿವಾದಕ್ಕೆ ಕಾರಣವಾಗಿದೆ.

Advertisement
Advertisement

ಕೇರ್ಪಳದ ಹಿಂದೂ ರುದ್ರಭೂಮಿಯ ಸಮೀಪ ದೊಡ್ಡ ಹೊಂಡ ತೋಡಲಾಗಿದ್ದು ಆ ಹೊಂಡದಲ್ಲಿ ಒಂದು ಲೋಡ್ ಕಸವನ್ನು ತಂದು ಸುರಿಯಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಮಶಾನದ ಬಳಿ ಹೊಂಡ ತೋಡಿ ಕಸ ಹಾಕುವುದನ್ನು ತಿಳಿದು ಸ್ಥಳಕ್ಕೆ ಆಗಮಿಸಿದ ನಗರ ಪಂಚಾಯತ್ ಸದಸ್ಯ ಸುಧಾಕರ, ಸುನಿಲ್‍ಕುಮಾರ್ ಕೇರ್ಪಳ, ಕೇಶವ ಪಾರೆಪ್ಪಾಡಿ, ಲಿಂಗಪ್ಪ ಗೌಡ, ಕರುಂಬಯ್ಯ, ನವೀನ್, ಧರ್ಮಪ್ರಕಾಶ್ ಮತ್ತಿತರರು ಸ್ಥಳಕ್ಕೆ ಆಗಮಿಸಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಇಲ್ಲಿ ಹಾಕಿರುವ ಕಸವನ್ನು ಕೂಡಲೇ ಹಿಂದಕ್ಕೆ ಕೊಂಡೊಯ್ಯುವಂತೆ ಆಗ್ರಹಿಸಿದ್ದಾರೆ. ಹಿಂದೂ ರುದ್ರಭೂಮಿಯ ಸಮೀಪ ತ್ಯಾಜ್ಯ ಸುರಿದರೆ ದೊಡ್ಡ ಸಮಸ್ಯೆ ಸೃಷ್ಠಿಯಾಗಲಿದೆ. ಅಲ್ಲದೆ ಸಮೀಪದಲ್ಲಿಯೇ ಪಯಸ್ವಿನಿ ನದಿ ಹರಿಯುತ್ತಿದ್ದು ನೀರು ಮಲಿನಗೊಳ್ಳುವ ಅಪಾಯವಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದೆ ಜಯನಗರದ ಹಿಂದೂ ರುದ್ರಭೂಮಿಯ ಬಳಿಯಲ್ಲಿ ಕಸ ಹಾಕಲಾಗಿತ್ತು. ಇದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಕಾರಣ ಕಸವನ್ನು ಹಿಂದಕ್ಕೆ ತರಲಾಗಿತ್ತು. ಸುಳ್ಯ ನಗರ ಪಂಚಾಯಿತಿಯ ಮುಂಭಾಗದ ಮತ್ತು ಹಿಂಭಾಗದ ಕಟ್ಟಡದಲ್ಲಿ ಕಸ ತುಂಬಿಸಿಟ್ಟ ಕಾರಣ ಸಮಸ್ಯೆ ಸೃಷ್ಠಿಸಿತ್ತು. ಆದುದರಿಂದ ಇದನ್ನು ತೆರವು ಮಾಡಲು ಕ್ರಮ ಆರಂಭಿಸಲಾಗಿತ್ತು. ಆದರೆ ಸುಮಾರು 20 ಲೋಡ್ ಕಸ ಸಾಗಾಟ ಮಾಡಿದ ನಂತರ ಕಾರ್ಯಚರಣೆ ಸ್ಥಗಿತಗೊಂಡಿದೆ.

ಮನೆ ಮನೆ ಕಸ ಸಂಗ್ರಹ ಸ್ಥಗಿತ: ಸುಳ್ಯ ನಗರದ ಮನೆ ಮನೆಗಳಿಂದ ಕಸ ಸಂಗ್ರಹಿಸಿರುವುದು ಎರಡು ವಾರಗಳಿಂದ ಸ್ಥಗಿತಗೊಂಡಿದೆ. ಕಸ ವಿಲೇವಾರಿಗೆ ಸ್ಥಳವಿಲ್ಲ ಎಂದು ಕಸ ಸಂಗ್ರಹಿಸುವುದೇ ಸ್ಥಗಿತವಾಗಿದೆ. ಇದರಿಂದ ಮನೆ ಮನೆಗಳಲ್ಲಿ ಕಸ ಕೊಳೆಯುತಿರುವುದಾಗಿ ಸಾರ್ವಜನಿಕರು ದೂರಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

3 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

9 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

1 day ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

1 day ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

1 day ago