ಸುಳ್ಯ: ಸುಳ್ಯ ನಗರ ಪಂಚಾಯತ್ ಮುಂಭಾಗದ ಕಟ್ಟಡದಲ್ಲಿ ತುಂಬಿಡಲಾಗಿರುವ ಕಸದಿಂದ ಒಂದು ಲೋಡನ್ನು ಕೇರ್ಪಳದ ಹಿಂದೂ ರುದ್ರಭೂಮಿಯಲ್ಲಿ ತಂದು ಸುರಿದಿರುವುದು ವಿವಾದಕ್ಕೆ ಕಾರಣವಾಗಿದೆ.
ಕೇರ್ಪಳದ ಹಿಂದೂ ರುದ್ರಭೂಮಿಯ ಸಮೀಪ ದೊಡ್ಡ ಹೊಂಡ ತೋಡಲಾಗಿದ್ದು ಆ ಹೊಂಡದಲ್ಲಿ ಒಂದು ಲೋಡ್ ಕಸವನ್ನು ತಂದು ಸುರಿಯಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಮಶಾನದ ಬಳಿ ಹೊಂಡ ತೋಡಿ ಕಸ ಹಾಕುವುದನ್ನು ತಿಳಿದು ಸ್ಥಳಕ್ಕೆ ಆಗಮಿಸಿದ ನಗರ ಪಂಚಾಯತ್ ಸದಸ್ಯ ಸುಧಾಕರ, ಸುನಿಲ್ಕುಮಾರ್ ಕೇರ್ಪಳ, ಕೇಶವ ಪಾರೆಪ್ಪಾಡಿ, ಲಿಂಗಪ್ಪ ಗೌಡ, ಕರುಂಬಯ್ಯ, ನವೀನ್, ಧರ್ಮಪ್ರಕಾಶ್ ಮತ್ತಿತರರು ಸ್ಥಳಕ್ಕೆ ಆಗಮಿಸಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಇಲ್ಲಿ ಹಾಕಿರುವ ಕಸವನ್ನು ಕೂಡಲೇ ಹಿಂದಕ್ಕೆ ಕೊಂಡೊಯ್ಯುವಂತೆ ಆಗ್ರಹಿಸಿದ್ದಾರೆ. ಹಿಂದೂ ರುದ್ರಭೂಮಿಯ ಸಮೀಪ ತ್ಯಾಜ್ಯ ಸುರಿದರೆ ದೊಡ್ಡ ಸಮಸ್ಯೆ ಸೃಷ್ಠಿಯಾಗಲಿದೆ. ಅಲ್ಲದೆ ಸಮೀಪದಲ್ಲಿಯೇ ಪಯಸ್ವಿನಿ ನದಿ ಹರಿಯುತ್ತಿದ್ದು ನೀರು ಮಲಿನಗೊಳ್ಳುವ ಅಪಾಯವಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದೆ ಜಯನಗರದ ಹಿಂದೂ ರುದ್ರಭೂಮಿಯ ಬಳಿಯಲ್ಲಿ ಕಸ ಹಾಕಲಾಗಿತ್ತು. ಇದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಕಾರಣ ಕಸವನ್ನು ಹಿಂದಕ್ಕೆ ತರಲಾಗಿತ್ತು. ಸುಳ್ಯ ನಗರ ಪಂಚಾಯಿತಿಯ ಮುಂಭಾಗದ ಮತ್ತು ಹಿಂಭಾಗದ ಕಟ್ಟಡದಲ್ಲಿ ಕಸ ತುಂಬಿಸಿಟ್ಟ ಕಾರಣ ಸಮಸ್ಯೆ ಸೃಷ್ಠಿಸಿತ್ತು. ಆದುದರಿಂದ ಇದನ್ನು ತೆರವು ಮಾಡಲು ಕ್ರಮ ಆರಂಭಿಸಲಾಗಿತ್ತು. ಆದರೆ ಸುಮಾರು 20 ಲೋಡ್ ಕಸ ಸಾಗಾಟ ಮಾಡಿದ ನಂತರ ಕಾರ್ಯಚರಣೆ ಸ್ಥಗಿತಗೊಂಡಿದೆ.
ಮನೆ ಮನೆ ಕಸ ಸಂಗ್ರಹ ಸ್ಥಗಿತ: ಸುಳ್ಯ ನಗರದ ಮನೆ ಮನೆಗಳಿಂದ ಕಸ ಸಂಗ್ರಹಿಸಿರುವುದು ಎರಡು ವಾರಗಳಿಂದ ಸ್ಥಗಿತಗೊಂಡಿದೆ. ಕಸ ವಿಲೇವಾರಿಗೆ ಸ್ಥಳವಿಲ್ಲ ಎಂದು ಕಸ ಸಂಗ್ರಹಿಸುವುದೇ ಸ್ಥಗಿತವಾಗಿದೆ. ಇದರಿಂದ ಮನೆ ಮನೆಗಳಲ್ಲಿ ಕಸ ಕೊಳೆಯುತಿರುವುದಾಗಿ ಸಾರ್ವಜನಿಕರು ದೂರಿದ್ದಾರೆ.
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…