Advertisement
ಸುದ್ದಿಗಳು

ಕೇರ್ಪಳದ ಹಿಂದೂ ರುದ್ರಭೂಮಿಯಲ್ಲಿ ಕಸ- ಸ್ಥಳೀಯರ ವಿರೋಧ

Share

ಸುಳ್ಯ: ಸುಳ್ಯ ನಗರ ಪಂಚಾಯತ್ ಮುಂಭಾಗದ ಕಟ್ಟಡದಲ್ಲಿ ತುಂಬಿಡಲಾಗಿರುವ ಕಸದಿಂದ ಒಂದು ಲೋಡನ್ನು ಕೇರ್ಪಳದ ಹಿಂದೂ ರುದ್ರಭೂಮಿಯಲ್ಲಿ ತಂದು ಸುರಿದಿರುವುದು ವಿವಾದಕ್ಕೆ ಕಾರಣವಾಗಿದೆ.

ಕೇರ್ಪಳದ ಹಿಂದೂ ರುದ್ರಭೂಮಿಯ ಸಮೀಪ ದೊಡ್ಡ ಹೊಂಡ ತೋಡಲಾಗಿದ್ದು ಆ ಹೊಂಡದಲ್ಲಿ ಒಂದು ಲೋಡ್ ಕಸವನ್ನು ತಂದು ಸುರಿಯಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಮಶಾನದ ಬಳಿ ಹೊಂಡ ತೋಡಿ ಕಸ ಹಾಕುವುದನ್ನು ತಿಳಿದು ಸ್ಥಳಕ್ಕೆ ಆಗಮಿಸಿದ ನಗರ ಪಂಚಾಯತ್ ಸದಸ್ಯ ಸುಧಾಕರ, ಸುನಿಲ್‍ಕುಮಾರ್ ಕೇರ್ಪಳ, ಕೇಶವ ಪಾರೆಪ್ಪಾಡಿ, ಲಿಂಗಪ್ಪ ಗೌಡ, ಕರುಂಬಯ್ಯ, ನವೀನ್, ಧರ್ಮಪ್ರಕಾಶ್ ಮತ್ತಿತರರು ಸ್ಥಳಕ್ಕೆ ಆಗಮಿಸಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಇಲ್ಲಿ ಹಾಕಿರುವ ಕಸವನ್ನು ಕೂಡಲೇ ಹಿಂದಕ್ಕೆ ಕೊಂಡೊಯ್ಯುವಂತೆ ಆಗ್ರಹಿಸಿದ್ದಾರೆ. ಹಿಂದೂ ರುದ್ರಭೂಮಿಯ ಸಮೀಪ ತ್ಯಾಜ್ಯ ಸುರಿದರೆ ದೊಡ್ಡ ಸಮಸ್ಯೆ ಸೃಷ್ಠಿಯಾಗಲಿದೆ. ಅಲ್ಲದೆ ಸಮೀಪದಲ್ಲಿಯೇ ಪಯಸ್ವಿನಿ ನದಿ ಹರಿಯುತ್ತಿದ್ದು ನೀರು ಮಲಿನಗೊಳ್ಳುವ ಅಪಾಯವಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದೆ ಜಯನಗರದ ಹಿಂದೂ ರುದ್ರಭೂಮಿಯ ಬಳಿಯಲ್ಲಿ ಕಸ ಹಾಕಲಾಗಿತ್ತು. ಇದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಕಾರಣ ಕಸವನ್ನು ಹಿಂದಕ್ಕೆ ತರಲಾಗಿತ್ತು. ಸುಳ್ಯ ನಗರ ಪಂಚಾಯಿತಿಯ ಮುಂಭಾಗದ ಮತ್ತು ಹಿಂಭಾಗದ ಕಟ್ಟಡದಲ್ಲಿ ಕಸ ತುಂಬಿಸಿಟ್ಟ ಕಾರಣ ಸಮಸ್ಯೆ ಸೃಷ್ಠಿಸಿತ್ತು. ಆದುದರಿಂದ ಇದನ್ನು ತೆರವು ಮಾಡಲು ಕ್ರಮ ಆರಂಭಿಸಲಾಗಿತ್ತು. ಆದರೆ ಸುಮಾರು 20 ಲೋಡ್ ಕಸ ಸಾಗಾಟ ಮಾಡಿದ ನಂತರ ಕಾರ್ಯಚರಣೆ ಸ್ಥಗಿತಗೊಂಡಿದೆ.

ಮನೆ ಮನೆ ಕಸ ಸಂಗ್ರಹ ಸ್ಥಗಿತ: ಸುಳ್ಯ ನಗರದ ಮನೆ ಮನೆಗಳಿಂದ ಕಸ ಸಂಗ್ರಹಿಸಿರುವುದು ಎರಡು ವಾರಗಳಿಂದ ಸ್ಥಗಿತಗೊಂಡಿದೆ. ಕಸ ವಿಲೇವಾರಿಗೆ ಸ್ಥಳವಿಲ್ಲ ಎಂದು ಕಸ ಸಂಗ್ರಹಿಸುವುದೇ ಸ್ಥಗಿತವಾಗಿದೆ. ಇದರಿಂದ ಮನೆ ಮನೆಗಳಲ್ಲಿ ಕಸ ಕೊಳೆಯುತಿರುವುದಾಗಿ ಸಾರ್ವಜನಿಕರು ದೂರಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

8 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

15 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

15 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

16 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago