Advertisement
ಸುದ್ದಿಗಳು

ಕೇರ್ಪಳದ ಹಿಂದೂ ರುದ್ರಭೂಮಿಯಲ್ಲಿ ಕಸ- ಸ್ಥಳೀಯರ ವಿರೋಧ

Share

ಸುಳ್ಯ: ಸುಳ್ಯ ನಗರ ಪಂಚಾಯತ್ ಮುಂಭಾಗದ ಕಟ್ಟಡದಲ್ಲಿ ತುಂಬಿಡಲಾಗಿರುವ ಕಸದಿಂದ ಒಂದು ಲೋಡನ್ನು ಕೇರ್ಪಳದ ಹಿಂದೂ ರುದ್ರಭೂಮಿಯಲ್ಲಿ ತಂದು ಸುರಿದಿರುವುದು ವಿವಾದಕ್ಕೆ ಕಾರಣವಾಗಿದೆ.

ಕೇರ್ಪಳದ ಹಿಂದೂ ರುದ್ರಭೂಮಿಯ ಸಮೀಪ ದೊಡ್ಡ ಹೊಂಡ ತೋಡಲಾಗಿದ್ದು ಆ ಹೊಂಡದಲ್ಲಿ ಒಂದು ಲೋಡ್ ಕಸವನ್ನು ತಂದು ಸುರಿಯಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಮಶಾನದ ಬಳಿ ಹೊಂಡ ತೋಡಿ ಕಸ ಹಾಕುವುದನ್ನು ತಿಳಿದು ಸ್ಥಳಕ್ಕೆ ಆಗಮಿಸಿದ ನಗರ ಪಂಚಾಯತ್ ಸದಸ್ಯ ಸುಧಾಕರ, ಸುನಿಲ್‍ಕುಮಾರ್ ಕೇರ್ಪಳ, ಕೇಶವ ಪಾರೆಪ್ಪಾಡಿ, ಲಿಂಗಪ್ಪ ಗೌಡ, ಕರುಂಬಯ್ಯ, ನವೀನ್, ಧರ್ಮಪ್ರಕಾಶ್ ಮತ್ತಿತರರು ಸ್ಥಳಕ್ಕೆ ಆಗಮಿಸಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಇಲ್ಲಿ ಹಾಕಿರುವ ಕಸವನ್ನು ಕೂಡಲೇ ಹಿಂದಕ್ಕೆ ಕೊಂಡೊಯ್ಯುವಂತೆ ಆಗ್ರಹಿಸಿದ್ದಾರೆ. ಹಿಂದೂ ರುದ್ರಭೂಮಿಯ ಸಮೀಪ ತ್ಯಾಜ್ಯ ಸುರಿದರೆ ದೊಡ್ಡ ಸಮಸ್ಯೆ ಸೃಷ್ಠಿಯಾಗಲಿದೆ. ಅಲ್ಲದೆ ಸಮೀಪದಲ್ಲಿಯೇ ಪಯಸ್ವಿನಿ ನದಿ ಹರಿಯುತ್ತಿದ್ದು ನೀರು ಮಲಿನಗೊಳ್ಳುವ ಅಪಾಯವಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದೆ ಜಯನಗರದ ಹಿಂದೂ ರುದ್ರಭೂಮಿಯ ಬಳಿಯಲ್ಲಿ ಕಸ ಹಾಕಲಾಗಿತ್ತು. ಇದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಕಾರಣ ಕಸವನ್ನು ಹಿಂದಕ್ಕೆ ತರಲಾಗಿತ್ತು. ಸುಳ್ಯ ನಗರ ಪಂಚಾಯಿತಿಯ ಮುಂಭಾಗದ ಮತ್ತು ಹಿಂಭಾಗದ ಕಟ್ಟಡದಲ್ಲಿ ಕಸ ತುಂಬಿಸಿಟ್ಟ ಕಾರಣ ಸಮಸ್ಯೆ ಸೃಷ್ಠಿಸಿತ್ತು. ಆದುದರಿಂದ ಇದನ್ನು ತೆರವು ಮಾಡಲು ಕ್ರಮ ಆರಂಭಿಸಲಾಗಿತ್ತು. ಆದರೆ ಸುಮಾರು 20 ಲೋಡ್ ಕಸ ಸಾಗಾಟ ಮಾಡಿದ ನಂತರ ಕಾರ್ಯಚರಣೆ ಸ್ಥಗಿತಗೊಂಡಿದೆ.

Advertisement

ಮನೆ ಮನೆ ಕಸ ಸಂಗ್ರಹ ಸ್ಥಗಿತ: ಸುಳ್ಯ ನಗರದ ಮನೆ ಮನೆಗಳಿಂದ ಕಸ ಸಂಗ್ರಹಿಸಿರುವುದು ಎರಡು ವಾರಗಳಿಂದ ಸ್ಥಗಿತಗೊಂಡಿದೆ. ಕಸ ವಿಲೇವಾರಿಗೆ ಸ್ಥಳವಿಲ್ಲ ಎಂದು ಕಸ ಸಂಗ್ರಹಿಸುವುದೇ ಸ್ಥಗಿತವಾಗಿದೆ. ಇದರಿಂದ ಮನೆ ಮನೆಗಳಲ್ಲಿ ಕಸ ಕೊಳೆಯುತಿರುವುದಾಗಿ ಸಾರ್ವಜನಿಕರು ದೂರಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 minutes ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

32 minutes ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

39 minutes ago

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

1 day ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 day ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago