Advertisement
ಧಾರ್ಮಿಕ

ಕೇಶವಕೃಪಾ ವೇದ ಶಿಬಿರ ಸಮಾರೋಪ

Share

ಸುಳ್ಯ: ಉದಾತ್ತ ಚಿಂತನೆಗಳ ಮೂಲಕ ಹುಟ್ಟಿಕೊಂಡ ಅಂತಃ ಸತ್ವ ಹಿಂದೂ ಧರ್ಮದಲ್ಲಿ ಅಡಗಿದೆ. ನಮ್ಮ ಸಂಸ್ಕೃತಿಯನ್ನು ಪಾಲಿಸಬೇಕಾದ ಮತ್ತು ಉಳಿಸಬೇಕಾದ ಅಗತ್ಯತೆ ಹಿಂದೆಂದಿಗಿಂತಲೂ ಇಂದು ಹೆಚ್ಚಿದೆ. ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದ ನಮ್ಮ ಸಂಸ್ಕೃತಿಯ ಬಗ್ಗೆ ಉಂಟಾಗಿರುವ ಅಸಡ್ಡೆ ಮತ್ತು ಅನಾದರ ನಮ್ಮ ಬದುಕಿಗೆ ಮಾರಕವಾಗಿದೆ ಎಂದು ಸುಬ್ರಹ್ಮಣ್ಯ ಶ್ರೀ ಸಂಪುಠ ನರಸಿಂಹ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿ ಹೇಳಿದ್ದಾರೆ.

ಸುಳ್ಯ ಹಳೆಗೇಟಿನ ಶ್ರೀ ಕೃಶವ ಕೃಪಾ ವೇದ ಯೋಗ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ ನಡೆದ ವೇದ-ಯೋಗ-ಕಲಾ ಶಿಬಿರದ ಸಮಾರೋಪ ಮತ್ತು ಕೇಶವ ಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು. ಆರ್ಥಿಕ ಸ್ವಾತಂತ್ರ್ಯ ಮತ್ತು ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದ ಜೀವನದಲ್ಲಿ ಬದ್ಧತೆ ಇಲ್ಲದಂತಾಗಿದೆ. ಆದುದರಿಂದ ಪ್ರತಿಯೊಬ್ಬರ ಜೀವನದಲ್ಲಿ ಮತ್ತು ಪ್ರತಿ ಮನೆಯಲ್ಲಿ ಧರ್ಮ, ಸಂಸ್ಕøತಿಯ ಆಚರಣೆ ಆಗಬೇಕಾಗಿದೆ. ನಮ್ಮ ಸಂಸ್ಕೃತಿ ಮತ್ತು ಆಚಾರವನ್ನು ನಾವು ಚೆನ್ನಾಗಿಟ್ಟರೆ ಅದು ನಮ್ಮನ್ನು ಚೆನ್ನಾಗಿಡುತ್ತದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ ಮಾತನಾಡಿ, ನಮ್ಮ ಮೂಲ ಸಂಸ್ಕೃತಿ ಉಳಿದಿರುವುದು ವೇದ ಮತ್ತು ಸಂಸ್ಕೃತದಿಂದ ಮಾತ್ರ. ಕೇಶವಕೃಪಾ ವೇದ ಶಿಬಿರದ ಮೂಲಕ ವೇದವನ್ನು ಕಲಿಸಿ ನಮ್ಮ ಸಂಸ್ಕೃತಿ ಮತ್ತು ಧರ್ಮವನ್ನು ಉಳಿಸುವ ಕೆಲಸ ಶ್ಲಾಘನೀಯ ಎಂದರು.
ಕೃಷಿಕ ರಾಜಗೋಪಾಲ ಭಟ್ ಉಂಡೆಮನೆ ಅಧ್ಯಕ್ಷತೆ ವಹಿಸಿದ್ದರು.

ಪ್ರತಿಷ್ಠಾನದ ವತಿಯಿಂದ ನೀಡುವ ಕೇಶವ ಸ್ಮೃತಿ ಪ್ರಶಸ್ತಿ ಗಳನ್ನು ಈ ಸಂದರ್ಭದಲ್ಲಿ ಪ್ರದಾನ ಮಾಡಲಾಯಿತು. ವೇದಸ್ಮೃತಿ ಪ್ರಶಸ್ತಿಯನ್ನು ವೈದಿಕ ವಿದ್ವಾಂಸ ಪುರುಷೋತ್ತಮ ಭಟ್ ದೇರ್ಕಜೆ, ಯೋಗ ಸ್ಮೃತಿ ಪ್ರಶಸ್ತಿಯನ್ನು ಯೋಗ ಸಂಪನ್ಮೂಲ ವ್ಯಕ್ತಿ ಪ್ರಕಾಶ್ ಮೂಡಿತ್ತಾಯ, ಕಲಾಸ್ಮೃತಿ ಪ್ರಶಸ್ತಿಯನ್ನು ಸಾಕ್ಸೋಫೋನ್ ವಾದಕ ಬಾಲಚಂದ್ರ ಪೆರಾಜೆ ಅವರಿಗೆ ನೀಡಿ ಗೌರವಿಸಲಾಯಿತು. ಸ್ವರ್ಣೋದ್ಯಮಿ ಬಲರಾಮ ಆಚಾರ್ಯ ಪ್ರಶಸ್ತಿ ಪ್ರದಾನ ಮಾಡಿದರು.

ಕೇಶವ ಕೃಪಾ ವೇದ-ಯೋಗ-ಕಲಾ ಶಿಬಿರದ ಸಂಚಾಲಕ ಎಂ.ಎಸ್.ನಾಗರಾಜ ರಾವ್ ಅಭಿನಂದನಾ ಭಾಷಣ ಮಾಡಿದರು. ನಟರಾಜ ಶರ್ಮ, ಅಭಿರಾಮ ಶರ್ಮ, ಸುದರ್ಶನ ಭಟ್ ಪ್ರಶಸ್ತಿ ಪತ್ರ ವಾಚಿಸಿದರು. ಕೇಶವಕೃಪಾ ವೇದ-ಯೋಗ-ಕಲಾ ಪ್ರತಿಷ್ಠಾನದ ಗೌರವಾಧ್ಯಕ್ಷ ಎಂ.ಗೋಪಾಲಕೃಷ್ಣ ಭಟ್ ವಗೆನಾಡು ಉಪಸ್ಥಿತರಿದ್ದರು. ಶಿಬಿರದ ವಿದ್ಯಾರ್ಥಿಗಳಿಗೆ ನೀಡುವ ಸರ್ವ ಪ್ರಥಮ ಪ್ರಶಸ್ತಿಯನ್ನು ತೇಜಸ್ವಿನಾರಾಯಣ, ಶಶಾಂಕ ಭಟ್, ಪ್ರತಿಭಾ ಪುರಸ್ಕಾರವನ್ನು ಅಸೀಮಾ ಅಗ್ನಿಹೋತ್ರಿ, ಅದ್ವೈತ್ ಅಗ್ನಿಹೋತ್ರಿ, ಅಭಿಷೇಕ್ ಭಟ್‍ಗೆ ನೀಡಲಾಯಿತು.

ಪ್ರತಿಷ್ಢಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ಸ್ವಾಗತಿಸಿದರು. ಎಂ.ಎಸ್.ನಾಗರಾಜರಾವ್ ಪ್ರಸ್ತಾವನೆಗೈದರು. ಶ್ರೀದೇವಿ ನಾಗರಾಜ ಭಟ್ ಮತ್ತು ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

2 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

3 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

18 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago