Advertisement
ಸುದ್ದಿಗಳು

ಕೊಕ್ಕೋ ಮಾತ್ರಾ ಖರೀದಿ – ಅಡಿಕೆ ಖರೀದಿ ದಿನಾಂಕ ಮುಂದೆ ತಿಳಿಸಲಾಗುತ್ತದೆ – ಕ್ಯಾಂಪ್ಕೋ ಸ್ಪಷ್ಟನೆ

Share

ಮಂಗಳೂರು: ಕ್ಯಾಂಪ್ಕೋ ವತಿಯಿಂದ ಏ.9 ರಿಂದ ಕೊಕ್ಕೋ ಖರೀದಿ ಆರಂಭವಾಗಲಿದೆ ಆದರೆ ಅಡಿಕೆ ಖರೀದಿ ಬಗ್ಗೆ ಸಿದ್ಧತೆ ನಡೆಯುತ್ತಿದೆ. ಈ ಬಗ್ಗೆ ಬೆಳೆಗಾರರಿಗೆ ಮುಂದೆ ಖರೀದಿ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ  ಸ್ಪಷ್ಟಪಡಿಸಿದ್ದಾರೆ.

ಕ್ಯಾಂಪ್ಕೋ ಮೂಲಕ ಅಡಿಕೆ ಖರೀದಿ ನಡೆಸಲು ಸಿದ್ಧತೆ ನಡೆದಿದೆ. ಆದರೆ ಪೂರಕ ವ್ಯವಸ್ಥೆಗಳೂ ನಡೆಯುತ್ತಿದೆ. ಖರೀದಿ ದಿನ ನಿಗದಿಯಾಗಿಲ್ಲ, ಈ ಬಗ್ಗೆ ಮುಂದೆ ತಿಳಿಸಲಾಗುವುದು, ಬೆಳೆಗಾರರಿಗೆ ಯಾವುದೇ ಗೊಂದಲ ಬೇಡ  ಎಂದು  ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ.ಕೊಕ್ಕೋ ಖರೀದಿ ಈ ಹಿಂದೆ ತಿಳಿಸಿದಂತೆ ನಿಗದಿಪಡಿಸಿದ ದಿನಗಳಲ್ಲಿ  ನಡೆಯುತ್ತದೆ.

ಏ.9 ರಿಂದ ಪ್ರತೀ ಗುರುವಾರ ಸುಳ್ಯ, ವಿಟ್ಲ, ಅಡ್ಯನಡ್ಕ, ಕಡಬ ದ ಕ್ಯಾಂಪ್ಕೋ ಶಾಖೆಗಳಲ್ಲಿ ಕೊಕ್ಕೋ ಖರೀದಿ.

ಏ.10 ರಿಂದ ಪ್ರತೀ ಶುಕ್ರವಾರ ಪುತ್ತೂರು ಶಾಖೆಯಲ್ಲಿ  ಕೊಕ್ಕೋ ಖರೀದಿ ,

ಏ.13 ರಿಂದ ಪ್ರತೀ ಸೋಮವಾರ ಬೆಳ್ತಂಗಡಿ ಶಾಖೆಯಲ್ಲಿ ಕೊಕ್ಕೋ ಖರೀದಿ ಮಾಡಲಾಗುತ್ತದೆ.

ಬೆಳಗ್ಗೆ 9 ರಿಂದ 12 ಗಂಟೆಯವರೆಗೆ ಕೊಕ್ಕೋ ಖರೀದಿ ನಡೆಯುತ್ತದೆ   ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ.   ಕೃಷಿ ವಸ್ತು ಮಾರಾಟಕ್ಕೆ ಬರುವ ಹಿನ್ನೆಲೆಯಲ್ಲಿ  ಕ್ಯಾಂಪ್ಕೋ ಐಡಿ ಕಾರ್ಡ್ ಅಥವಾ ಆರ್ ಟಿ ಸಿ ಜೊತೆ ಬರಬೇಕಾಗಿದೆ. ಮುಂದಿನ ದಿನಗಳಲ್ಲಿ  ಕೊಕ್ಕೋ ಖರೀದಿ ಅವಧಿ ವಿಸ್ತರಣೆ, ಇತರ ಕಡೆಗಳಲ್ಲೂ ಖರೀದಿ ನಡೆಸಬೇಕೇ ಎಂಬುದರ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 hour ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 hour ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

2 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

10 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

20 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

24 hours ago