Advertisement
ರಾಜ್ಯ

ಕೊಡಗಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ : 100 ಕೋಟಿ ರೂಪಾಯಿ ಬಿಡುಗಡೆ

Share

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಉಂಟಾದ ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಗೆ ಒಟ್ಟು 536 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಹಿಂದೆ ಘೋಷಣೆ ಮಾಡಲಾಗಿದೆ. ಇದರಲ್ಲಿ ಪ್ರಥಮ ಹಂತದಲ್ಲಿ ತಕ್ಷಣ ರೂ.100 ಕೋಟಿ ಬಿಡುಗಡೆ ಮಾಡಲಾಗುವುದು  ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆಗೆ ಆಗಮಿಸಿದ ಸಂದರ್ಭ ಕೂಡಿಗೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.ಜಿಲ್ಲಾಡಳಿತದ ಖಾತೆಯಲ್ಲಿರುವ ಹಣವನ್ನು ತಕ್ಷಣ ಪರಿಹಾರ ಕಾರ್ಯಗಳಿಗೆ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿಗಳು ಭೂಕುಸಿತದಿಂದ ನಾಪತ್ತೆಯಾದವರ ಕುಟುಂಬಕ್ಕೆ ತಕ್ಷಣ ಒಂದು ಲಕ್ಷ ಪರಿಹಾರ ನೀಡುವುದು, ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ 5 ಲಕ್ಷ ಪರಿಹಾರ ಒದಗಿಸುವಂತೆ ನಿರ್ದೇಶನ ನೀಡಿದರು. ಕೇಂದ್ರದಿಂದ ಆಗಮಿಸಿದ ನೆರೆ ಅಧ್ಯಯನ ಅಧಿಕಾರಿಗಳ ತಂಡದ ವರದಿಗಳ ಆಧಾರದ ಮೇರೆಗೆ ಕೇಂದ್ರದಿಂದ ಇನ್ನೂ ಅಧಿಕ ಮೊತ್ತದ ಪರಿಹಾರ ಬಿಡುಗಡೆಗೊಳ್ಳಲಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.

Advertisement

ಸಭೆಯಲ್ಲಿ ಪಾಲ್ಗೊಂಡಿದ್ದ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಪ್ರಕೃತಿ ವಿಕೋಪದ ಸಂದರ್ಭ ಅರಣ್ಯ ಇಲಾಖೆಯನ್ನು ಹೊರತುಪಡಿಸಿ ಉಳಿದೆಲ್ಲಾ ಇಲಾಖೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿವೆ ಎಂದು ಆರೋಪಿಸಿದರು.ಮಡಿಕೇರಿ ವಿಭಾಗ ಡಿಎಫ್‍ಒ ಜನಪ್ರತಿನಿಧಿಗಳೊಂದಿಗೆ ಉದ್ದಟತನದಿಂದ ವರ್ತಿಸುತ್ತಿದ್ದಾರೆ. ಶಾಸಕರ ಕರೆಗಳಿಗೆ ಮನ್ನಣೆ ನೀಡುತ್ತಿಲ್ಲ. ಅರಣ್ಯ ನಡುವೆ ವಿದ್ಯುತ್ ಸಂಪರ್ಕ ಸಂದರ್ಭ ಇನ್ಸುಲೇಟಡ್ ಲೈನ್ ಅಳವಡಿಕೆ ಹೆಸರಿನಲ್ಲಿ ಮಾಲ್ದಾರೆ ಗಿರಿಜನರ ಹಾಡಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಬಾಡಗದಲ್ಲಿ ಬೆಳೆಗಾರರೊಬ್ಬರ ಮನೆಗೆ ನುಗ್ಗಿ ಅರಣ್ಯ ಇಲಾಖೆ ದೌರ್ಜನ್ಯ ಎಸಗಿದೆ ಎಂದು ಗಂಭೀರ ಆರೋಪ ಮಾಡಿದರು.ಡಿಎಫ್‍ಓ ಮತ್ತು ಸೆಸ್ಕ್ ಅಧಿಕಾರಿಗಳಿಂದ ವಿವರ ಬಯಸಿದ ಸಿಎಂ ಡಿಎಫ್‍ಒ ಪ್ರಭಾಕರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಕೂಡಲೆ ವಿದ್ಯುತ್ ಸಂಪರ್ಕ ಕಲ್ಪಿಸಿ ಮುಂದಿನ 15 ದಿನಗಳ ಒಳಗಾಗಿ ಶಾಶ್ವತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಆದೇಶಿಸಿದರು.

Advertisement

ಶಾಸಕ ಅಪ್ಪಚ್ಚುರಂಜನ್ ಮಾತನಾಡಿ, ಕಳೆದ ಬಾರಿಗಿಂತ ಈ ಬಾರಿ ಜಿಲ್ಲೆಯಲ್ಲಿ ಹೆಚ್ಚಿನ ಮಟ್ಟದಲ್ಲಿ ಹಾನಿ ಉಂಟಾಗಿಲ್ಲ. ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಹೆಚ್ಚಿನ ಹಾನಿಯನ್ನು ತಡೆದಿದ್ದು ಅಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿದರು.

ಸಭೆಯಲ್ಲಿ ಸಚಿವರುಗಳಾದ ಆರ್.ಅಶೋಕ್, ಎಸ್.ಸುರೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯರುಗಳಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಪಂ ಸಿಇಒ ಲಕ್ಷ್ಮಿಪ್ರಿಯ, ಸದಸ್ಯರಾದ ಚಂದ್ರಕಲಾ, ಮಂಜುಳಾ, ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾಡಳಿತದ ಅಧಿಕಾರಿಗಳು ಇದ್ದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

5 hours ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

6 hours ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

8 hours ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

8 hours ago

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

14 hours ago

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

3 days ago