(ಸಾಂದರ್ಭಿಕ ಚಿತ್ರ)
ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು ಭಾರೀ ಮಳೆ ಸುರಿಯಿತು. ಎರಡು ದಿನಗಳಿಂದಲೂ ರೆಡ್ ಅಲರ್ಟ್ ಎಂದು ಘೋಷಿಸಿದ್ದ ಹವಾಮಾನ ಇಲಾಖೆ ಇನ್ನು ಅಪಾಯ ಕಡಿಮೆ ಎಂದು ಶನಿವಾರ ಸಂಜೆ ಹೇಳಿದೆ.
ಎರಡು ದಿನಗಳ ಕಾಲ ಸುರಿದ ಮಳೆಗೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಬರೆ ಕುಸಿತ ಉಂಟಾಗಿದೆ. ನಗರದ ರಾಜಾಸೀಟು ರಸ್ತೆಯ, ಎಸ್ಪಿ ವಸತಿ ಗೃಹದ ಸಮೀಪ ಅಲ್ಪ ಪ್ರಮಾಣದ ಬರೆ ಕುಸಿದಿದೆ. ಗುಡ್ಡದ ಮೇಲೆ ಮತ್ತು ಕೆಳಗೆ ಮನೆ ಕಟ್ಟಿಕೊಂಡು ವಾಸಿಸುತ್ತಿರುವ ನಿವಾಸಿಗಳಿಗೆ ಆತಂಕ ಮೂಡಿದೆ.
ವಿರಾಜಪೇಟೆ ತಾಲೂಕಿನ ತಿತಿಮತಿ ಬಳಿ ರಸ್ತೆಗೆ ಮರ ಬಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸುಮಾರು ಮುಕ್ಕಾಲು ಗಂಟೆ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ದಿನಪೂರ್ತಿ ಸುರಿಯುತ್ತಿರುವ ಹದವಾದ ಮಳೆಯಿಂದಾಗಿ ಜಿಲ್ಲಾ ಕೇಂದ್ರ ಮಡಿಕೇರಿ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಮೈ ಕೊರೆಯುವ ಚಳಿಯ ವಾತಾವರಣ ನಿರ್ಮಾಣವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮಡಿಕೇರಿಯಲ್ಲಿ 1 ಇಂಚು ಮಳೆ ದಾಖಲಾಗಿದೆ. ಜಿಲ್ಲೆಯ ಸೋಮವಾರಪೇಟೆ, ವೀರಾಜಪೇಟೆ ತಾಲೂಕು ವ್ಯಾಪಿಯಲ್ಲೂ ಉತ್ತಮ ಮಳೆಯಾಗುತ್ತಿರುವ ಬಗ್ಗೆ ವರದಿಯಾಗಿದೆ.
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…