(ಸಾಂದರ್ಭಿಕ ಚಿತ್ರ)
ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು ಭಾರೀ ಮಳೆ ಸುರಿಯಿತು. ಎರಡು ದಿನಗಳಿಂದಲೂ ರೆಡ್ ಅಲರ್ಟ್ ಎಂದು ಘೋಷಿಸಿದ್ದ ಹವಾಮಾನ ಇಲಾಖೆ ಇನ್ನು ಅಪಾಯ ಕಡಿಮೆ ಎಂದು ಶನಿವಾರ ಸಂಜೆ ಹೇಳಿದೆ.
ಎರಡು ದಿನಗಳ ಕಾಲ ಸುರಿದ ಮಳೆಗೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಬರೆ ಕುಸಿತ ಉಂಟಾಗಿದೆ. ನಗರದ ರಾಜಾಸೀಟು ರಸ್ತೆಯ, ಎಸ್ಪಿ ವಸತಿ ಗೃಹದ ಸಮೀಪ ಅಲ್ಪ ಪ್ರಮಾಣದ ಬರೆ ಕುಸಿದಿದೆ. ಗುಡ್ಡದ ಮೇಲೆ ಮತ್ತು ಕೆಳಗೆ ಮನೆ ಕಟ್ಟಿಕೊಂಡು ವಾಸಿಸುತ್ತಿರುವ ನಿವಾಸಿಗಳಿಗೆ ಆತಂಕ ಮೂಡಿದೆ.
ವಿರಾಜಪೇಟೆ ತಾಲೂಕಿನ ತಿತಿಮತಿ ಬಳಿ ರಸ್ತೆಗೆ ಮರ ಬಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸುಮಾರು ಮುಕ್ಕಾಲು ಗಂಟೆ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ದಿನಪೂರ್ತಿ ಸುರಿಯುತ್ತಿರುವ ಹದವಾದ ಮಳೆಯಿಂದಾಗಿ ಜಿಲ್ಲಾ ಕೇಂದ್ರ ಮಡಿಕೇರಿ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಮೈ ಕೊರೆಯುವ ಚಳಿಯ ವಾತಾವರಣ ನಿರ್ಮಾಣವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮಡಿಕೇರಿಯಲ್ಲಿ 1 ಇಂಚು ಮಳೆ ದಾಖಲಾಗಿದೆ. ಜಿಲ್ಲೆಯ ಸೋಮವಾರಪೇಟೆ, ವೀರಾಜಪೇಟೆ ತಾಲೂಕು ವ್ಯಾಪಿಯಲ್ಲೂ ಉತ್ತಮ ಮಳೆಯಾಗುತ್ತಿರುವ ಬಗ್ಗೆ ವರದಿಯಾಗಿದೆ.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…