(ಸಾಂದರ್ಭಿಕ ಚಿತ್ರ)
ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು ಭಾರೀ ಮಳೆ ಸುರಿಯಿತು. ಎರಡು ದಿನಗಳಿಂದಲೂ ರೆಡ್ ಅಲರ್ಟ್ ಎಂದು ಘೋಷಿಸಿದ್ದ ಹವಾಮಾನ ಇಲಾಖೆ ಇನ್ನು ಅಪಾಯ ಕಡಿಮೆ ಎಂದು ಶನಿವಾರ ಸಂಜೆ ಹೇಳಿದೆ.
ಎರಡು ದಿನಗಳ ಕಾಲ ಸುರಿದ ಮಳೆಗೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಬರೆ ಕುಸಿತ ಉಂಟಾಗಿದೆ. ನಗರದ ರಾಜಾಸೀಟು ರಸ್ತೆಯ, ಎಸ್ಪಿ ವಸತಿ ಗೃಹದ ಸಮೀಪ ಅಲ್ಪ ಪ್ರಮಾಣದ ಬರೆ ಕುಸಿದಿದೆ. ಗುಡ್ಡದ ಮೇಲೆ ಮತ್ತು ಕೆಳಗೆ ಮನೆ ಕಟ್ಟಿಕೊಂಡು ವಾಸಿಸುತ್ತಿರುವ ನಿವಾಸಿಗಳಿಗೆ ಆತಂಕ ಮೂಡಿದೆ.
ವಿರಾಜಪೇಟೆ ತಾಲೂಕಿನ ತಿತಿಮತಿ ಬಳಿ ರಸ್ತೆಗೆ ಮರ ಬಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸುಮಾರು ಮುಕ್ಕಾಲು ಗಂಟೆ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ದಿನಪೂರ್ತಿ ಸುರಿಯುತ್ತಿರುವ ಹದವಾದ ಮಳೆಯಿಂದಾಗಿ ಜಿಲ್ಲಾ ಕೇಂದ್ರ ಮಡಿಕೇರಿ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಮೈ ಕೊರೆಯುವ ಚಳಿಯ ವಾತಾವರಣ ನಿರ್ಮಾಣವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮಡಿಕೇರಿಯಲ್ಲಿ 1 ಇಂಚು ಮಳೆ ದಾಖಲಾಗಿದೆ. ಜಿಲ್ಲೆಯ ಸೋಮವಾರಪೇಟೆ, ವೀರಾಜಪೇಟೆ ತಾಲೂಕು ವ್ಯಾಪಿಯಲ್ಲೂ ಉತ್ತಮ ಮಳೆಯಾಗುತ್ತಿರುವ ಬಗ್ಗೆ ವರದಿಯಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…