(ಸಾಂದರ್ಭಿಕ ಚಿತ್ರ)
ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು ಭಾರೀ ಮಳೆ ಸುರಿಯಿತು. ಎರಡು ದಿನಗಳಿಂದಲೂ ರೆಡ್ ಅಲರ್ಟ್ ಎಂದು ಘೋಷಿಸಿದ್ದ ಹವಾಮಾನ ಇಲಾಖೆ ಇನ್ನು ಅಪಾಯ ಕಡಿಮೆ ಎಂದು ಶನಿವಾರ ಸಂಜೆ ಹೇಳಿದೆ.
ಎರಡು ದಿನಗಳ ಕಾಲ ಸುರಿದ ಮಳೆಗೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಬರೆ ಕುಸಿತ ಉಂಟಾಗಿದೆ. ನಗರದ ರಾಜಾಸೀಟು ರಸ್ತೆಯ, ಎಸ್ಪಿ ವಸತಿ ಗೃಹದ ಸಮೀಪ ಅಲ್ಪ ಪ್ರಮಾಣದ ಬರೆ ಕುಸಿದಿದೆ. ಗುಡ್ಡದ ಮೇಲೆ ಮತ್ತು ಕೆಳಗೆ ಮನೆ ಕಟ್ಟಿಕೊಂಡು ವಾಸಿಸುತ್ತಿರುವ ನಿವಾಸಿಗಳಿಗೆ ಆತಂಕ ಮೂಡಿದೆ.
ವಿರಾಜಪೇಟೆ ತಾಲೂಕಿನ ತಿತಿಮತಿ ಬಳಿ ರಸ್ತೆಗೆ ಮರ ಬಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸುಮಾರು ಮುಕ್ಕಾಲು ಗಂಟೆ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ದಿನಪೂರ್ತಿ ಸುರಿಯುತ್ತಿರುವ ಹದವಾದ ಮಳೆಯಿಂದಾಗಿ ಜಿಲ್ಲಾ ಕೇಂದ್ರ ಮಡಿಕೇರಿ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಮೈ ಕೊರೆಯುವ ಚಳಿಯ ವಾತಾವರಣ ನಿರ್ಮಾಣವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮಡಿಕೇರಿಯಲ್ಲಿ 1 ಇಂಚು ಮಳೆ ದಾಖಲಾಗಿದೆ. ಜಿಲ್ಲೆಯ ಸೋಮವಾರಪೇಟೆ, ವೀರಾಜಪೇಟೆ ತಾಲೂಕು ವ್ಯಾಪಿಯಲ್ಲೂ ಉತ್ತಮ ಮಳೆಯಾಗುತ್ತಿರುವ ಬಗ್ಗೆ ವರದಿಯಾಗಿದೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…