ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು ಭಾರೀ ಮಳೆ ಸುರಿಯಿತು. ಎರಡು ದಿನಗಳಿಂದಲೂ ರೆಡ್ ಅಲರ್ಟ್ ಎಂದು ಘೋಷಿಸಿದ್ದ ಹವಾಮಾನ ಇಲಾಖೆ ಇನ್ನು ಅಪಾಯ ಕಡಿಮೆ ಎಂದು ಶನಿವಾರ ಸಂಜೆ ಹೇಳಿದೆ.
ಎರಡು ದಿನಗಳ ಕಾಲ ಸುರಿದ ಮಳೆಗೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಬರೆ ಕುಸಿತ ಉಂಟಾಗಿದೆ. ನಗರದ ರಾಜಾಸೀಟು ರಸ್ತೆಯ, ಎಸ್ಪಿ ವಸತಿ ಗೃಹದ ಸಮೀಪ ಅಲ್ಪ ಪ್ರಮಾಣದ ಬರೆ ಕುಸಿದಿದೆ. ಗುಡ್ಡದ ಮೇಲೆ ಮತ್ತು ಕೆಳಗೆ ಮನೆ ಕಟ್ಟಿಕೊಂಡು ವಾಸಿಸುತ್ತಿರುವ ನಿವಾಸಿಗಳಿಗೆ ಆತಂಕ ಮೂಡಿದೆ.
ವಿರಾಜಪೇಟೆ ತಾಲೂಕಿನ ತಿತಿಮತಿ ಬಳಿ ರಸ್ತೆಗೆ ಮರ ಬಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸುಮಾರು ಮುಕ್ಕಾಲು ಗಂಟೆ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ದಿನಪೂರ್ತಿ ಸುರಿಯುತ್ತಿರುವ ಹದವಾದ ಮಳೆಯಿಂದಾಗಿ ಜಿಲ್ಲಾ ಕೇಂದ್ರ ಮಡಿಕೇರಿ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಮೈ ಕೊರೆಯುವ ಚಳಿಯ ವಾತಾವರಣ ನಿರ್ಮಾಣವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮಡಿಕೇರಿಯಲ್ಲಿ 1 ಇಂಚು ಮಳೆ ದಾಖಲಾಗಿದೆ. ಜಿಲ್ಲೆಯ ಸೋಮವಾರಪೇಟೆ, ವೀರಾಜಪೇಟೆ ತಾಲೂಕು ವ್ಯಾಪಿಯಲ್ಲೂ ಉತ್ತಮ ಮಳೆಯಾಗುತ್ತಿರುವ ಬಗ್ಗೆ ವರದಿಯಾಗಿದೆ.
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…