(ಸಾಂದರ್ಭಿಕ ಚಿತ್ರ)
ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು ಭಾರೀ ಮಳೆ ಸುರಿಯಿತು. ಎರಡು ದಿನಗಳಿಂದಲೂ ರೆಡ್ ಅಲರ್ಟ್ ಎಂದು ಘೋಷಿಸಿದ್ದ ಹವಾಮಾನ ಇಲಾಖೆ ಇನ್ನು ಅಪಾಯ ಕಡಿಮೆ ಎಂದು ಶನಿವಾರ ಸಂಜೆ ಹೇಳಿದೆ.
ಎರಡು ದಿನಗಳ ಕಾಲ ಸುರಿದ ಮಳೆಗೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಬರೆ ಕುಸಿತ ಉಂಟಾಗಿದೆ. ನಗರದ ರಾಜಾಸೀಟು ರಸ್ತೆಯ, ಎಸ್ಪಿ ವಸತಿ ಗೃಹದ ಸಮೀಪ ಅಲ್ಪ ಪ್ರಮಾಣದ ಬರೆ ಕುಸಿದಿದೆ. ಗುಡ್ಡದ ಮೇಲೆ ಮತ್ತು ಕೆಳಗೆ ಮನೆ ಕಟ್ಟಿಕೊಂಡು ವಾಸಿಸುತ್ತಿರುವ ನಿವಾಸಿಗಳಿಗೆ ಆತಂಕ ಮೂಡಿದೆ.
ವಿರಾಜಪೇಟೆ ತಾಲೂಕಿನ ತಿತಿಮತಿ ಬಳಿ ರಸ್ತೆಗೆ ಮರ ಬಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸುಮಾರು ಮುಕ್ಕಾಲು ಗಂಟೆ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ದಿನಪೂರ್ತಿ ಸುರಿಯುತ್ತಿರುವ ಹದವಾದ ಮಳೆಯಿಂದಾಗಿ ಜಿಲ್ಲಾ ಕೇಂದ್ರ ಮಡಿಕೇರಿ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಮೈ ಕೊರೆಯುವ ಚಳಿಯ ವಾತಾವರಣ ನಿರ್ಮಾಣವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮಡಿಕೇರಿಯಲ್ಲಿ 1 ಇಂಚು ಮಳೆ ದಾಖಲಾಗಿದೆ. ಜಿಲ್ಲೆಯ ಸೋಮವಾರಪೇಟೆ, ವೀರಾಜಪೇಟೆ ತಾಲೂಕು ವ್ಯಾಪಿಯಲ್ಲೂ ಉತ್ತಮ ಮಳೆಯಾಗುತ್ತಿರುವ ಬಗ್ಗೆ ವರದಿಯಾಗಿದೆ.
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…