ಮಡಿಕೇರಿ :ಕೊಡಗಿನ ಬಹುತೇಕ ಕಡೆಗಳಲ್ಲಿ ಗುರುವಾರ ಮಧ್ಯಾಹ್ನದ ನಂತರ ನಿರಂತರವಾಗಿ ಮಳೆಯಾಗಿದೆ. ಆದ್ರಾ ಮಳೆಯ ಕೊನೆಯ ಪಾದದಲ್ಲಿ ಮಳೆ ಚುರುಕುಗೊಂಡಿದ್ದು, ಈ ವೇಗ ಪುನರ್ವಸುವಿಗೂ ವಿಸ್ತರಿಸಬಹುದೇ ಎನ್ನುವುದನ್ನು ಕಾದು ನೋಡಬೇಕಷ್ಟೆ.
ಬೆಳಗ್ಗಿನಿಂದಲೆ ಮಡಿಕೇರಿ ವ್ಯಾಪ್ತಿಯಲ್ಲಿ ದಟ್ಟ ಮಂಜು, ಆಗೊಮ್ಮೆ ಈಗೊಮ್ಮೆ ಸುರಿಯುತ್ತಿದ್ದ ಮಳೆ ಮುಂಗಾರು ಚೇತರಿಸಿಕೊಳ್ಳುತ್ತಿರುವ ಸೂಚನೆಯನ್ನು ನೀಡಿದೆ. ಮಧ್ಯಾಹ್ನದ ಬಳಿಕ ನಿರಂತರವಾಗಿ ಸಂಜೆಯವರೆಗೆ ಹದವಾಗಿ ಸುರಿಯುತ್ತಿದ್ದ ಮಳೆ ಮುಂಗಾರಿನ ವಾತಾವರಣಕ್ಕೆ ಕೈಚಾಚಿತು.
ಕಳೆದ ಸಾಲಿನಲ್ಲಿ ಇದೇ ಅವಧಿಗೆ 53.48 ಇಂಚು ಸರಾಸರಿ ಮಳೆ ಜಿಲ್ಲೆಯಲ್ಲಿ ಆಗಿತ್ತಾದರೆ, ಪ್ರಸಕ್ತ ಸಾಲಿನಲ್ಲಿ ಕೇವಲ 17.76 ಇಂಚು ಮಳೆಯಾಗಿದ್ದು, ಜಿಲ್ಲೆ ಬರದ ಹೊಸ್ತಿಲಿನಲ್ಲಿ ನಿಂತು ಬಿಟ್ಟಿದೆಯೋ ಎನ್ನುವ ಆತಂಕವನ್ನು ಹುಟ್ಟು ಹಾಕಿದೆ. ಇಂತಹ ಪರಿಸ್ಥಿತಿಯ ನಡುವೆ ಇಂದು ಸುರಿದ ಮಳೆ ಒಂದಷ್ಟು ನೆಮ್ಮದಿಯನ್ನು ಜಿಲ್ಲೆಯ ರೈತಾಪಿ ವರ್ಗದಲ್ಲಿ ಹಾಗೂ ಸಾರ್ವಜನಿಕರಲ್ಲಿ ಮೂಡಿಸಿದೆ.
ಕಾವೇರಿಯ ಉಗಮ ಸ್ಥಾನವಾದ ಭಾಗಮಂಡಲ, ತಲಕಾವೇರಿ ವಿಭಾಗಗಳಲ್ಲು ಇಲ್ಲಿಯವರೆಗೆ ಅಲ್ಪಸ್ವಲ್ಪ ಮಳೆಯಾಗಿದೆಯೇ ಹೊರತು, ವರ್ಷಂಪ್ರತಿ ಸುರಿಯುವ ಭಾರೀ ಮಳೆ ಕಂಡು ಬಂದಿಲ್ಲ. ಇದೇ ಪರಿಸ್ಥಿತಿ ಜಿಲ್ಲೆಯ ಕಾವೇರಿ ನದಿ ತಟದ ಎಲ್ಲಾ ಪ್ರದೇಶಗಳಲ್ಲು ಕಂಡು ಬಂದಿದೆಯಾದರೆ, ವೀರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಜಿಲ್ಲೆಯ ಇತರೆ ಭಾಗಗಳಿಗಿಂತ ಒಂದಷ್ಟು ಉತ್ತಮ ಮಳೆಯಾಗಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…