ಮಡಿಕೇರಿ :ಕೊಡಗಿನ ಬಹುತೇಕ ಕಡೆಗಳಲ್ಲಿ ಗುರುವಾರ ಮಧ್ಯಾಹ್ನದ ನಂತರ ನಿರಂತರವಾಗಿ ಮಳೆಯಾಗಿದೆ. ಆದ್ರಾ ಮಳೆಯ ಕೊನೆಯ ಪಾದದಲ್ಲಿ ಮಳೆ ಚುರುಕುಗೊಂಡಿದ್ದು, ಈ ವೇಗ ಪುನರ್ವಸುವಿಗೂ ವಿಸ್ತರಿಸಬಹುದೇ ಎನ್ನುವುದನ್ನು ಕಾದು ನೋಡಬೇಕಷ್ಟೆ.
ಬೆಳಗ್ಗಿನಿಂದಲೆ ಮಡಿಕೇರಿ ವ್ಯಾಪ್ತಿಯಲ್ಲಿ ದಟ್ಟ ಮಂಜು, ಆಗೊಮ್ಮೆ ಈಗೊಮ್ಮೆ ಸುರಿಯುತ್ತಿದ್ದ ಮಳೆ ಮುಂಗಾರು ಚೇತರಿಸಿಕೊಳ್ಳುತ್ತಿರುವ ಸೂಚನೆಯನ್ನು ನೀಡಿದೆ. ಮಧ್ಯಾಹ್ನದ ಬಳಿಕ ನಿರಂತರವಾಗಿ ಸಂಜೆಯವರೆಗೆ ಹದವಾಗಿ ಸುರಿಯುತ್ತಿದ್ದ ಮಳೆ ಮುಂಗಾರಿನ ವಾತಾವರಣಕ್ಕೆ ಕೈಚಾಚಿತು.
ಕಳೆದ ಸಾಲಿನಲ್ಲಿ ಇದೇ ಅವಧಿಗೆ 53.48 ಇಂಚು ಸರಾಸರಿ ಮಳೆ ಜಿಲ್ಲೆಯಲ್ಲಿ ಆಗಿತ್ತಾದರೆ, ಪ್ರಸಕ್ತ ಸಾಲಿನಲ್ಲಿ ಕೇವಲ 17.76 ಇಂಚು ಮಳೆಯಾಗಿದ್ದು, ಜಿಲ್ಲೆ ಬರದ ಹೊಸ್ತಿಲಿನಲ್ಲಿ ನಿಂತು ಬಿಟ್ಟಿದೆಯೋ ಎನ್ನುವ ಆತಂಕವನ್ನು ಹುಟ್ಟು ಹಾಕಿದೆ. ಇಂತಹ ಪರಿಸ್ಥಿತಿಯ ನಡುವೆ ಇಂದು ಸುರಿದ ಮಳೆ ಒಂದಷ್ಟು ನೆಮ್ಮದಿಯನ್ನು ಜಿಲ್ಲೆಯ ರೈತಾಪಿ ವರ್ಗದಲ್ಲಿ ಹಾಗೂ ಸಾರ್ವಜನಿಕರಲ್ಲಿ ಮೂಡಿಸಿದೆ.
ಕಾವೇರಿಯ ಉಗಮ ಸ್ಥಾನವಾದ ಭಾಗಮಂಡಲ, ತಲಕಾವೇರಿ ವಿಭಾಗಗಳಲ್ಲು ಇಲ್ಲಿಯವರೆಗೆ ಅಲ್ಪಸ್ವಲ್ಪ ಮಳೆಯಾಗಿದೆಯೇ ಹೊರತು, ವರ್ಷಂಪ್ರತಿ ಸುರಿಯುವ ಭಾರೀ ಮಳೆ ಕಂಡು ಬಂದಿಲ್ಲ. ಇದೇ ಪರಿಸ್ಥಿತಿ ಜಿಲ್ಲೆಯ ಕಾವೇರಿ ನದಿ ತಟದ ಎಲ್ಲಾ ಪ್ರದೇಶಗಳಲ್ಲು ಕಂಡು ಬಂದಿದೆಯಾದರೆ, ವೀರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಜಿಲ್ಲೆಯ ಇತರೆ ಭಾಗಗಳಿಗಿಂತ ಒಂದಷ್ಟು ಉತ್ತಮ ಮಳೆಯಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…