ಮಡಿಕೇರಿ :ಕೊಡಗಿನ ಬಹುತೇಕ ಕಡೆಗಳಲ್ಲಿ ಗುರುವಾರ ಮಧ್ಯಾಹ್ನದ ನಂತರ ನಿರಂತರವಾಗಿ ಮಳೆಯಾಗಿದೆ. ಆದ್ರಾ ಮಳೆಯ ಕೊನೆಯ ಪಾದದಲ್ಲಿ ಮಳೆ ಚುರುಕುಗೊಂಡಿದ್ದು, ಈ ವೇಗ ಪುನರ್ವಸುವಿಗೂ ವಿಸ್ತರಿಸಬಹುದೇ ಎನ್ನುವುದನ್ನು ಕಾದು ನೋಡಬೇಕಷ್ಟೆ.
ಬೆಳಗ್ಗಿನಿಂದಲೆ ಮಡಿಕೇರಿ ವ್ಯಾಪ್ತಿಯಲ್ಲಿ ದಟ್ಟ ಮಂಜು, ಆಗೊಮ್ಮೆ ಈಗೊಮ್ಮೆ ಸುರಿಯುತ್ತಿದ್ದ ಮಳೆ ಮುಂಗಾರು ಚೇತರಿಸಿಕೊಳ್ಳುತ್ತಿರುವ ಸೂಚನೆಯನ್ನು ನೀಡಿದೆ. ಮಧ್ಯಾಹ್ನದ ಬಳಿಕ ನಿರಂತರವಾಗಿ ಸಂಜೆಯವರೆಗೆ ಹದವಾಗಿ ಸುರಿಯುತ್ತಿದ್ದ ಮಳೆ ಮುಂಗಾರಿನ ವಾತಾವರಣಕ್ಕೆ ಕೈಚಾಚಿತು.
ಕಳೆದ ಸಾಲಿನಲ್ಲಿ ಇದೇ ಅವಧಿಗೆ 53.48 ಇಂಚು ಸರಾಸರಿ ಮಳೆ ಜಿಲ್ಲೆಯಲ್ಲಿ ಆಗಿತ್ತಾದರೆ, ಪ್ರಸಕ್ತ ಸಾಲಿನಲ್ಲಿ ಕೇವಲ 17.76 ಇಂಚು ಮಳೆಯಾಗಿದ್ದು, ಜಿಲ್ಲೆ ಬರದ ಹೊಸ್ತಿಲಿನಲ್ಲಿ ನಿಂತು ಬಿಟ್ಟಿದೆಯೋ ಎನ್ನುವ ಆತಂಕವನ್ನು ಹುಟ್ಟು ಹಾಕಿದೆ. ಇಂತಹ ಪರಿಸ್ಥಿತಿಯ ನಡುವೆ ಇಂದು ಸುರಿದ ಮಳೆ ಒಂದಷ್ಟು ನೆಮ್ಮದಿಯನ್ನು ಜಿಲ್ಲೆಯ ರೈತಾಪಿ ವರ್ಗದಲ್ಲಿ ಹಾಗೂ ಸಾರ್ವಜನಿಕರಲ್ಲಿ ಮೂಡಿಸಿದೆ.
ಕಾವೇರಿಯ ಉಗಮ ಸ್ಥಾನವಾದ ಭಾಗಮಂಡಲ, ತಲಕಾವೇರಿ ವಿಭಾಗಗಳಲ್ಲು ಇಲ್ಲಿಯವರೆಗೆ ಅಲ್ಪಸ್ವಲ್ಪ ಮಳೆಯಾಗಿದೆಯೇ ಹೊರತು, ವರ್ಷಂಪ್ರತಿ ಸುರಿಯುವ ಭಾರೀ ಮಳೆ ಕಂಡು ಬಂದಿಲ್ಲ. ಇದೇ ಪರಿಸ್ಥಿತಿ ಜಿಲ್ಲೆಯ ಕಾವೇರಿ ನದಿ ತಟದ ಎಲ್ಲಾ ಪ್ರದೇಶಗಳಲ್ಲು ಕಂಡು ಬಂದಿದೆಯಾದರೆ, ವೀರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಜಿಲ್ಲೆಯ ಇತರೆ ಭಾಗಗಳಿಗಿಂತ ಒಂದಷ್ಟು ಉತ್ತಮ ಮಳೆಯಾಗಿದೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…