ಮಡಿಕೇರಿ :ಕೊಡಗಿನ ಬಹುತೇಕ ಕಡೆಗಳಲ್ಲಿ ಗುರುವಾರ ಮಧ್ಯಾಹ್ನದ ನಂತರ ನಿರಂತರವಾಗಿ ಮಳೆಯಾಗಿದೆ. ಆದ್ರಾ ಮಳೆಯ ಕೊನೆಯ ಪಾದದಲ್ಲಿ ಮಳೆ ಚುರುಕುಗೊಂಡಿದ್ದು, ಈ ವೇಗ ಪುನರ್ವಸುವಿಗೂ ವಿಸ್ತರಿಸಬಹುದೇ ಎನ್ನುವುದನ್ನು ಕಾದು ನೋಡಬೇಕಷ್ಟೆ.
ಬೆಳಗ್ಗಿನಿಂದಲೆ ಮಡಿಕೇರಿ ವ್ಯಾಪ್ತಿಯಲ್ಲಿ ದಟ್ಟ ಮಂಜು, ಆಗೊಮ್ಮೆ ಈಗೊಮ್ಮೆ ಸುರಿಯುತ್ತಿದ್ದ ಮಳೆ ಮುಂಗಾರು ಚೇತರಿಸಿಕೊಳ್ಳುತ್ತಿರುವ ಸೂಚನೆಯನ್ನು ನೀಡಿದೆ. ಮಧ್ಯಾಹ್ನದ ಬಳಿಕ ನಿರಂತರವಾಗಿ ಸಂಜೆಯವರೆಗೆ ಹದವಾಗಿ ಸುರಿಯುತ್ತಿದ್ದ ಮಳೆ ಮುಂಗಾರಿನ ವಾತಾವರಣಕ್ಕೆ ಕೈಚಾಚಿತು.
ಕಳೆದ ಸಾಲಿನಲ್ಲಿ ಇದೇ ಅವಧಿಗೆ 53.48 ಇಂಚು ಸರಾಸರಿ ಮಳೆ ಜಿಲ್ಲೆಯಲ್ಲಿ ಆಗಿತ್ತಾದರೆ, ಪ್ರಸಕ್ತ ಸಾಲಿನಲ್ಲಿ ಕೇವಲ 17.76 ಇಂಚು ಮಳೆಯಾಗಿದ್ದು, ಜಿಲ್ಲೆ ಬರದ ಹೊಸ್ತಿಲಿನಲ್ಲಿ ನಿಂತು ಬಿಟ್ಟಿದೆಯೋ ಎನ್ನುವ ಆತಂಕವನ್ನು ಹುಟ್ಟು ಹಾಕಿದೆ. ಇಂತಹ ಪರಿಸ್ಥಿತಿಯ ನಡುವೆ ಇಂದು ಸುರಿದ ಮಳೆ ಒಂದಷ್ಟು ನೆಮ್ಮದಿಯನ್ನು ಜಿಲ್ಲೆಯ ರೈತಾಪಿ ವರ್ಗದಲ್ಲಿ ಹಾಗೂ ಸಾರ್ವಜನಿಕರಲ್ಲಿ ಮೂಡಿಸಿದೆ.
ಕಾವೇರಿಯ ಉಗಮ ಸ್ಥಾನವಾದ ಭಾಗಮಂಡಲ, ತಲಕಾವೇರಿ ವಿಭಾಗಗಳಲ್ಲು ಇಲ್ಲಿಯವರೆಗೆ ಅಲ್ಪಸ್ವಲ್ಪ ಮಳೆಯಾಗಿದೆಯೇ ಹೊರತು, ವರ್ಷಂಪ್ರತಿ ಸುರಿಯುವ ಭಾರೀ ಮಳೆ ಕಂಡು ಬಂದಿಲ್ಲ. ಇದೇ ಪರಿಸ್ಥಿತಿ ಜಿಲ್ಲೆಯ ಕಾವೇರಿ ನದಿ ತಟದ ಎಲ್ಲಾ ಪ್ರದೇಶಗಳಲ್ಲು ಕಂಡು ಬಂದಿದೆಯಾದರೆ, ವೀರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಜಿಲ್ಲೆಯ ಇತರೆ ಭಾಗಗಳಿಗಿಂತ ಒಂದಷ್ಟು ಉತ್ತಮ ಮಳೆಯಾಗಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…