ಮಡಿಕೇರಿ :ಕೊಡಗಿನ ಬಹುತೇಕ ಕಡೆಗಳಲ್ಲಿ ಗುರುವಾರ ಮಧ್ಯಾಹ್ನದ ನಂತರ ನಿರಂತರವಾಗಿ ಮಳೆಯಾಗಿದೆ. ಆದ್ರಾ ಮಳೆಯ ಕೊನೆಯ ಪಾದದಲ್ಲಿ ಮಳೆ ಚುರುಕುಗೊಂಡಿದ್ದು, ಈ ವೇಗ ಪುನರ್ವಸುವಿಗೂ ವಿಸ್ತರಿಸಬಹುದೇ ಎನ್ನುವುದನ್ನು ಕಾದು ನೋಡಬೇಕಷ್ಟೆ.
ಬೆಳಗ್ಗಿನಿಂದಲೆ ಮಡಿಕೇರಿ ವ್ಯಾಪ್ತಿಯಲ್ಲಿ ದಟ್ಟ ಮಂಜು, ಆಗೊಮ್ಮೆ ಈಗೊಮ್ಮೆ ಸುರಿಯುತ್ತಿದ್ದ ಮಳೆ ಮುಂಗಾರು ಚೇತರಿಸಿಕೊಳ್ಳುತ್ತಿರುವ ಸೂಚನೆಯನ್ನು ನೀಡಿದೆ. ಮಧ್ಯಾಹ್ನದ ಬಳಿಕ ನಿರಂತರವಾಗಿ ಸಂಜೆಯವರೆಗೆ ಹದವಾಗಿ ಸುರಿಯುತ್ತಿದ್ದ ಮಳೆ ಮುಂಗಾರಿನ ವಾತಾವರಣಕ್ಕೆ ಕೈಚಾಚಿತು.
ಕಳೆದ ಸಾಲಿನಲ್ಲಿ ಇದೇ ಅವಧಿಗೆ 53.48 ಇಂಚು ಸರಾಸರಿ ಮಳೆ ಜಿಲ್ಲೆಯಲ್ಲಿ ಆಗಿತ್ತಾದರೆ, ಪ್ರಸಕ್ತ ಸಾಲಿನಲ್ಲಿ ಕೇವಲ 17.76 ಇಂಚು ಮಳೆಯಾಗಿದ್ದು, ಜಿಲ್ಲೆ ಬರದ ಹೊಸ್ತಿಲಿನಲ್ಲಿ ನಿಂತು ಬಿಟ್ಟಿದೆಯೋ ಎನ್ನುವ ಆತಂಕವನ್ನು ಹುಟ್ಟು ಹಾಕಿದೆ. ಇಂತಹ ಪರಿಸ್ಥಿತಿಯ ನಡುವೆ ಇಂದು ಸುರಿದ ಮಳೆ ಒಂದಷ್ಟು ನೆಮ್ಮದಿಯನ್ನು ಜಿಲ್ಲೆಯ ರೈತಾಪಿ ವರ್ಗದಲ್ಲಿ ಹಾಗೂ ಸಾರ್ವಜನಿಕರಲ್ಲಿ ಮೂಡಿಸಿದೆ.
ಕಾವೇರಿಯ ಉಗಮ ಸ್ಥಾನವಾದ ಭಾಗಮಂಡಲ, ತಲಕಾವೇರಿ ವಿಭಾಗಗಳಲ್ಲು ಇಲ್ಲಿಯವರೆಗೆ ಅಲ್ಪಸ್ವಲ್ಪ ಮಳೆಯಾಗಿದೆಯೇ ಹೊರತು, ವರ್ಷಂಪ್ರತಿ ಸುರಿಯುವ ಭಾರೀ ಮಳೆ ಕಂಡು ಬಂದಿಲ್ಲ. ಇದೇ ಪರಿಸ್ಥಿತಿ ಜಿಲ್ಲೆಯ ಕಾವೇರಿ ನದಿ ತಟದ ಎಲ್ಲಾ ಪ್ರದೇಶಗಳಲ್ಲು ಕಂಡು ಬಂದಿದೆಯಾದರೆ, ವೀರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಜಿಲ್ಲೆಯ ಇತರೆ ಭಾಗಗಳಿಗಿಂತ ಒಂದಷ್ಟು ಉತ್ತಮ ಮಳೆಯಾಗಿದೆ.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…