Advertisement
ಸುದ್ದಿಗಳು

ಕೊಡಗಿನಲ್ಲಿ ಆದ್ರಾ ಮಳೆಯ ಸಡಗರ

Share

ಮಡಿಕೇರಿ  :ಕೊಡಗಿನ ಬಹುತೇಕ ಕಡೆಗಳಲ್ಲಿ ಗುರುವಾರ ಮಧ್ಯಾಹ್ನದ ನಂತರ ನಿರಂತರವಾಗಿ ಮಳೆಯಾಗಿದೆ. ಆದ್ರಾ  ಮಳೆಯ ಕೊನೆಯ ಪಾದದಲ್ಲಿ ಮಳೆ ಚುರುಕುಗೊಂಡಿದ್ದು, ಈ ವೇಗ ಪುನರ್ವಸುವಿಗೂ ವಿಸ್ತರಿಸಬಹುದೇ ಎನ್ನುವುದನ್ನು ಕಾದು ನೋಡಬೇಕಷ್ಟೆ.
ಬೆಳಗ್ಗಿನಿಂದಲೆ ಮಡಿಕೇರಿ ವ್ಯಾಪ್ತಿಯಲ್ಲಿ ದಟ್ಟ ಮಂಜು, ಆಗೊಮ್ಮೆ ಈಗೊಮ್ಮೆ ಸುರಿಯುತ್ತಿದ್ದ ಮಳೆ ಮುಂಗಾರು ಚೇತರಿಸಿಕೊಳ್ಳುತ್ತಿರುವ ಸೂಚನೆಯನ್ನು ನೀಡಿದೆ. ಮಧ್ಯಾಹ್ನದ ಬಳಿಕ ನಿರಂತರವಾಗಿ ಸಂಜೆಯವರೆಗೆ ಹದವಾಗಿ ಸುರಿಯುತ್ತಿದ್ದ ಮಳೆ ಮುಂಗಾರಿನ ವಾತಾವರಣಕ್ಕೆ ಕೈಚಾಚಿತು.
ಕಳೆದ ಸಾಲಿನಲ್ಲಿ ಇದೇ ಅವಧಿಗೆ 53.48 ಇಂಚು ಸರಾಸರಿ ಮಳೆ ಜಿಲ್ಲೆಯಲ್ಲಿ ಆಗಿತ್ತಾದರೆ, ಪ್ರಸಕ್ತ ಸಾಲಿನಲ್ಲಿ ಕೇವಲ 17.76 ಇಂಚು ಮಳೆಯಾಗಿದ್ದು, ಜಿಲ್ಲೆ ಬರದ ಹೊಸ್ತಿಲಿನಲ್ಲಿ ನಿಂತು ಬಿಟ್ಟಿದೆಯೋ ಎನ್ನುವ ಆತಂಕವನ್ನು ಹುಟ್ಟು ಹಾಕಿದೆ. ಇಂತಹ ಪರಿಸ್ಥಿತಿಯ ನಡುವೆ ಇಂದು ಸುರಿದ ಮಳೆ ಒಂದಷ್ಟು ನೆಮ್ಮದಿಯನ್ನು ಜಿಲ್ಲೆಯ ರೈತಾಪಿ ವರ್ಗದಲ್ಲಿ ಹಾಗೂ ಸಾರ್ವಜನಿಕರಲ್ಲಿ ಮೂಡಿಸಿದೆ.
ಕಾವೇರಿಯ ಉಗಮ ಸ್ಥಾನವಾದ ಭಾಗಮಂಡಲ, ತಲಕಾವೇರಿ ವಿಭಾಗಗಳಲ್ಲು ಇಲ್ಲಿಯವರೆಗೆ ಅಲ್ಪಸ್ವಲ್ಪ ಮಳೆಯಾಗಿದೆಯೇ ಹೊರತು, ವರ್ಷಂಪ್ರತಿ ಸುರಿಯುವ ಭಾರೀ ಮಳೆ ಕಂಡು ಬಂದಿಲ್ಲ. ಇದೇ ಪರಿಸ್ಥಿತಿ ಜಿಲ್ಲೆಯ ಕಾವೇರಿ ನದಿ ತಟದ ಎಲ್ಲಾ ಪ್ರದೇಶಗಳಲ್ಲು ಕಂಡು ಬಂದಿದೆಯಾದರೆ, ವೀರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಜಿಲ್ಲೆಯ ಇತರೆ ಭಾಗಗಳಿಗಿಂತ ಒಂದಷ್ಟು ಉತ್ತಮ ಮಳೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago