Advertisement
ಸುದ್ದಿಗಳು

ಕೊಡಗಿನಲ್ಲಿ ಆದ್ರಾ ಮಳೆಯ ಸಡಗರ

Share

ಮಡಿಕೇರಿ  :ಕೊಡಗಿನ ಬಹುತೇಕ ಕಡೆಗಳಲ್ಲಿ ಗುರುವಾರ ಮಧ್ಯಾಹ್ನದ ನಂತರ ನಿರಂತರವಾಗಿ ಮಳೆಯಾಗಿದೆ. ಆದ್ರಾ  ಮಳೆಯ ಕೊನೆಯ ಪಾದದಲ್ಲಿ ಮಳೆ ಚುರುಕುಗೊಂಡಿದ್ದು, ಈ ವೇಗ ಪುನರ್ವಸುವಿಗೂ ವಿಸ್ತರಿಸಬಹುದೇ ಎನ್ನುವುದನ್ನು ಕಾದು ನೋಡಬೇಕಷ್ಟೆ.
ಬೆಳಗ್ಗಿನಿಂದಲೆ ಮಡಿಕೇರಿ ವ್ಯಾಪ್ತಿಯಲ್ಲಿ ದಟ್ಟ ಮಂಜು, ಆಗೊಮ್ಮೆ ಈಗೊಮ್ಮೆ ಸುರಿಯುತ್ತಿದ್ದ ಮಳೆ ಮುಂಗಾರು ಚೇತರಿಸಿಕೊಳ್ಳುತ್ತಿರುವ ಸೂಚನೆಯನ್ನು ನೀಡಿದೆ. ಮಧ್ಯಾಹ್ನದ ಬಳಿಕ ನಿರಂತರವಾಗಿ ಸಂಜೆಯವರೆಗೆ ಹದವಾಗಿ ಸುರಿಯುತ್ತಿದ್ದ ಮಳೆ ಮುಂಗಾರಿನ ವಾತಾವರಣಕ್ಕೆ ಕೈಚಾಚಿತು.
ಕಳೆದ ಸಾಲಿನಲ್ಲಿ ಇದೇ ಅವಧಿಗೆ 53.48 ಇಂಚು ಸರಾಸರಿ ಮಳೆ ಜಿಲ್ಲೆಯಲ್ಲಿ ಆಗಿತ್ತಾದರೆ, ಪ್ರಸಕ್ತ ಸಾಲಿನಲ್ಲಿ ಕೇವಲ 17.76 ಇಂಚು ಮಳೆಯಾಗಿದ್ದು, ಜಿಲ್ಲೆ ಬರದ ಹೊಸ್ತಿಲಿನಲ್ಲಿ ನಿಂತು ಬಿಟ್ಟಿದೆಯೋ ಎನ್ನುವ ಆತಂಕವನ್ನು ಹುಟ್ಟು ಹಾಕಿದೆ. ಇಂತಹ ಪರಿಸ್ಥಿತಿಯ ನಡುವೆ ಇಂದು ಸುರಿದ ಮಳೆ ಒಂದಷ್ಟು ನೆಮ್ಮದಿಯನ್ನು ಜಿಲ್ಲೆಯ ರೈತಾಪಿ ವರ್ಗದಲ್ಲಿ ಹಾಗೂ ಸಾರ್ವಜನಿಕರಲ್ಲಿ ಮೂಡಿಸಿದೆ.
ಕಾವೇರಿಯ ಉಗಮ ಸ್ಥಾನವಾದ ಭಾಗಮಂಡಲ, ತಲಕಾವೇರಿ ವಿಭಾಗಗಳಲ್ಲು ಇಲ್ಲಿಯವರೆಗೆ ಅಲ್ಪಸ್ವಲ್ಪ ಮಳೆಯಾಗಿದೆಯೇ ಹೊರತು, ವರ್ಷಂಪ್ರತಿ ಸುರಿಯುವ ಭಾರೀ ಮಳೆ ಕಂಡು ಬಂದಿಲ್ಲ. ಇದೇ ಪರಿಸ್ಥಿತಿ ಜಿಲ್ಲೆಯ ಕಾವೇರಿ ನದಿ ತಟದ ಎಲ್ಲಾ ಪ್ರದೇಶಗಳಲ್ಲು ಕಂಡು ಬಂದಿದೆಯಾದರೆ, ವೀರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಜಿಲ್ಲೆಯ ಇತರೆ ಭಾಗಗಳಿಗಿಂತ ಒಂದಷ್ಟು ಉತ್ತಮ ಮಳೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago