Advertisement
ಸುದ್ದಿಗಳು

ಕೊಡಗಿನಲ್ಲಿ ಇದುವರೆಗೆ 9 ಮೃತದೇಹಗಳು ಪತ್ತೆ : 7 ಮಂದಿಯ ಶವಕ್ಕಾಗಿ ಶೋಧ : 90 ಮನೆಗಳು ಸಂಪೂರ್ಣ ಹಾನಿ

Share

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಸುರಿದ ಮಹಾಮಳೆಗೆ ಇದುವರೆಗೆ 9 ಮಂದಿ ಸಾವಿಗೀಡಾಗಿದ್ದು, 147 ಮನೆಗಳು ಭಾಗಶಃ ಹಾಗೂ 90 ಮನೆಗಳು ಸಂಪೂರ್ಣವಾಗಿ ಹಾನಿಯಾಗಿರುವುದಾಗಿ ಜಿಲ್ಲಾಧಿಕಾರಿಗಳು ಅಧಿಕೃತವಾಗಿ ಘೋಷಿಸಿದ್ದಾರೆ.

ಆದರೆ ಜಿಲ್ಲೆಯ ನದಿ ತೊರೆಗಳಲ್ಲಿ ಈಗಷ್ಟೇ ಪ್ರವಾಹ ಇಳಿಮುಖವಾಗುತ್ತಿರುವುದರಿಂದ ಮನೆ ಹಾನಿಯ ಪ್ರಮಾಣ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ. ಅಲ್ಲದೆ ತೋರ ಗ್ರಾಮದಲ್ಲಿ ಭೂಕುಸಿತದ ಸಂದರ್ಭ ನಾಪತ್ತೆಯಾದ 7 ಮಂದಿಯ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.

ಕೊಡಗು ಜಿಲ್ಲೆಯಲ್ಲಿ ಒಟ್ಟು 45 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 2270 ಕುಟುಂಬಗಳ 7873 ಜನರು ಆಶ್ರಯ ಪಡೆದಿದ್ದಾರೆ. ಒಟ್ಟು 79 ಪ್ರದೇಶಗಳು ಪ್ರವಾಹದಿಂದ ಪೀಡಿತವಾಗಿವೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 1507 ಜನರು ಮತ್ತು 19 ಜಾನುವಾರುಗಳನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ವೀರಾಜಪೇಟೆ ತಾಲೂಕಿನಲ್ಲಿ ಭೂಕುಸಿತವಾದ ತೋರ ಪ್ರದೇಶದಲ್ಲಿ ಕಾಣೆಯಾದ ಒಟ್ಟು 8 ಮಂದಿ ಪೈಕಿ ಸೋಮವಾರ ಒಬ್ಬರ ಮೃತದೇಹ ಪತ್ತೆಯಾಗಿದ್ದು,  7 ಮೃತದೇಹಗಳಿಗಾಗಿ ಶೋಧ ಕಾರ್ಯವನ್ನು ಮುಂದುವರೆಸಲಾಗಿದೆ. ಸೋಮವಾರದವರೆಗೆ ಎರಡು ಹಿಟಾಚಿಗಳನ್ನು ಬಳಸಲಾಗಿದ್ದರೆ, ಮಂಗಳವಾರದಿಂದ ಆರು ಹಿಟಾಚಿ ಯಂತ್ರಗಳನ್ನು ಬಳಸುವ ಮೂಲಕ ಶೋಧ ಕಾರ್ಯವನ್ನು ಚುರುಕುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಎನ್.ಡಿ.ಆರ್.ಎಫ್.ನ 34, ಭಾರತೀಯ ಸೇನೆಯ 17, ಪೊಲೀಸ್ ಇಲಾಖೆಯ 30 ಮತ್ತು ಗರುಡ ಫೋರ್ಸ್‍ನ 17 ಸೇರಿದಂತೆ ಒಟ್ಟು 98 ಅಧಿಕಾರಿ ಮತ್ತು ಬ್ಬಂದಿಗಳು ತೊಡಗಿಸಿಕೊಂಡಿದ್ದಾರೆ, ಜಿಲ್ಲೆಯ ಪ್ರದೇಶಗಳಲ್ಲೂ ಸಾರ್ವಜನಿಕರು ಹಾಗೂ ಸಾಕು ಪ್ರಾಣಿಗಳ ರಕ್ಷಣೆಗಾಗಿ ಎನ್.ಡಿ.ಆರ್.ಎಫ್., ಭಾರತೀಯ ಸೇನಾ ತುಕಡಿ, ಪೊಲೀಸ್ ಇಲಾಖೆಯ ಗರುಡ ಫೋರ್ಸ್, ಗೃಹ ರಕ್ಷಕ ದಳ, ಅಗ್ನಿಶಾಮಕ ದಳಗಳು ಕಾರ್ಯಾಚರಣೆ ನಡೆಸುವುದರೊಂದಿಗೆ ಹೆಚ್ಚಿನ ಪ್ರಾಣ ಹಾನಿಯಾಗುವುದನ್ನು ತಪ್ಪಿಸಿವೆ ಎಂದು ಅವರು ಹೇಳಿದ್ದಾರೆ.

ಸಾಮಾಗ್ರಿ ದಾಸ್ತಾನು ಸಾಕಷ್ಟಿದೆ:

ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದ ಆದ ಅನಾಹುತಗಳನ್ನು ಗಮನದಲ್ಲಿಟ್ಟುಕೊಂಡು ಈ ವರ್ಷ ಜಿಲ್ಲಾಡಳಿತವು ಪ್ರಕೃತಿ ವಿಕೋಪವನ್ನು ಎದುರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಾಗ ಪರಿಹಾರ ಕೇಂದ್ರಗಳ ನಿರ್ವಹಣೆಗೆ ಬೇಕಾಗುವ ಎಲ್ಲಾ ಅಗತ್ಯ ದಿನಬಳಕೆಯ ವಸ್ತುಗಳನ್ನೂ ಸಹ ಖರೀದಿಸಿ ದಾಸ್ತಾನಿಟ್ಟುಕೊಂಡಿದೆ. ಅಲ್ಲದೆ, ನೆರೆ ಜಿಲ್ಲೆಗಳಾದ ಉಡುಪಿ ಮತ್ತು ಮೈಸೂರು ಜಿಲ್ಲೆಗಳಿಂದಲೂ ದಿನಬಳಕೆಯ ವಸ್ತುಗಳನ್ನು ಖರೀದಿಸಿ ಈ ಜಿಲ್ಲೆಗೆ ಕಳುಹಿಸಿದ್ದು, ಪ್ರಸ್ತುತ ಪರಿಹಾರ ಕೇಂದ್ರ ನಡೆಸಲು ಬೇಕಾಗುವಷ್ಟು ದಿನಬಳಕೆಯ ಸಾಮಾಗ್ರಿಗಳು ಜಿಲ್ಲಾಡಳಿತದ ಬಳಿ ದಾಸ್ತಾನಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

3 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

4 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago