Advertisement
ಸುದ್ದಿಗಳು

ಕೊಡಗಿನಲ್ಲಿ ಇದುವರೆಗೆ 9 ಮೃತದೇಹಗಳು ಪತ್ತೆ : 7 ಮಂದಿಯ ಶವಕ್ಕಾಗಿ ಶೋಧ : 90 ಮನೆಗಳು ಸಂಪೂರ್ಣ ಹಾನಿ

Share

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಸುರಿದ ಮಹಾಮಳೆಗೆ ಇದುವರೆಗೆ 9 ಮಂದಿ ಸಾವಿಗೀಡಾಗಿದ್ದು, 147 ಮನೆಗಳು ಭಾಗಶಃ ಹಾಗೂ 90 ಮನೆಗಳು ಸಂಪೂರ್ಣವಾಗಿ ಹಾನಿಯಾಗಿರುವುದಾಗಿ ಜಿಲ್ಲಾಧಿಕಾರಿಗಳು ಅಧಿಕೃತವಾಗಿ ಘೋಷಿಸಿದ್ದಾರೆ.

ಆದರೆ ಜಿಲ್ಲೆಯ ನದಿ ತೊರೆಗಳಲ್ಲಿ ಈಗಷ್ಟೇ ಪ್ರವಾಹ ಇಳಿಮುಖವಾಗುತ್ತಿರುವುದರಿಂದ ಮನೆ ಹಾನಿಯ ಪ್ರಮಾಣ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ. ಅಲ್ಲದೆ ತೋರ ಗ್ರಾಮದಲ್ಲಿ ಭೂಕುಸಿತದ ಸಂದರ್ಭ ನಾಪತ್ತೆಯಾದ 7 ಮಂದಿಯ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.

ಕೊಡಗು ಜಿಲ್ಲೆಯಲ್ಲಿ ಒಟ್ಟು 45 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 2270 ಕುಟುಂಬಗಳ 7873 ಜನರು ಆಶ್ರಯ ಪಡೆದಿದ್ದಾರೆ. ಒಟ್ಟು 79 ಪ್ರದೇಶಗಳು ಪ್ರವಾಹದಿಂದ ಪೀಡಿತವಾಗಿವೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 1507 ಜನರು ಮತ್ತು 19 ಜಾನುವಾರುಗಳನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ವೀರಾಜಪೇಟೆ ತಾಲೂಕಿನಲ್ಲಿ ಭೂಕುಸಿತವಾದ ತೋರ ಪ್ರದೇಶದಲ್ಲಿ ಕಾಣೆಯಾದ ಒಟ್ಟು 8 ಮಂದಿ ಪೈಕಿ ಸೋಮವಾರ ಒಬ್ಬರ ಮೃತದೇಹ ಪತ್ತೆಯಾಗಿದ್ದು,  7 ಮೃತದೇಹಗಳಿಗಾಗಿ ಶೋಧ ಕಾರ್ಯವನ್ನು ಮುಂದುವರೆಸಲಾಗಿದೆ. ಸೋಮವಾರದವರೆಗೆ ಎರಡು ಹಿಟಾಚಿಗಳನ್ನು ಬಳಸಲಾಗಿದ್ದರೆ, ಮಂಗಳವಾರದಿಂದ ಆರು ಹಿಟಾಚಿ ಯಂತ್ರಗಳನ್ನು ಬಳಸುವ ಮೂಲಕ ಶೋಧ ಕಾರ್ಯವನ್ನು ಚುರುಕುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಎನ್.ಡಿ.ಆರ್.ಎಫ್.ನ 34, ಭಾರತೀಯ ಸೇನೆಯ 17, ಪೊಲೀಸ್ ಇಲಾಖೆಯ 30 ಮತ್ತು ಗರುಡ ಫೋರ್ಸ್‍ನ 17 ಸೇರಿದಂತೆ ಒಟ್ಟು 98 ಅಧಿಕಾರಿ ಮತ್ತು ಬ್ಬಂದಿಗಳು ತೊಡಗಿಸಿಕೊಂಡಿದ್ದಾರೆ, ಜಿಲ್ಲೆಯ ಪ್ರದೇಶಗಳಲ್ಲೂ ಸಾರ್ವಜನಿಕರು ಹಾಗೂ ಸಾಕು ಪ್ರಾಣಿಗಳ ರಕ್ಷಣೆಗಾಗಿ ಎನ್.ಡಿ.ಆರ್.ಎಫ್., ಭಾರತೀಯ ಸೇನಾ ತುಕಡಿ, ಪೊಲೀಸ್ ಇಲಾಖೆಯ ಗರುಡ ಫೋರ್ಸ್, ಗೃಹ ರಕ್ಷಕ ದಳ, ಅಗ್ನಿಶಾಮಕ ದಳಗಳು ಕಾರ್ಯಾಚರಣೆ ನಡೆಸುವುದರೊಂದಿಗೆ ಹೆಚ್ಚಿನ ಪ್ರಾಣ ಹಾನಿಯಾಗುವುದನ್ನು ತಪ್ಪಿಸಿವೆ ಎಂದು ಅವರು ಹೇಳಿದ್ದಾರೆ.

ಸಾಮಾಗ್ರಿ ದಾಸ್ತಾನು ಸಾಕಷ್ಟಿದೆ:

ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದ ಆದ ಅನಾಹುತಗಳನ್ನು ಗಮನದಲ್ಲಿಟ್ಟುಕೊಂಡು ಈ ವರ್ಷ ಜಿಲ್ಲಾಡಳಿತವು ಪ್ರಕೃತಿ ವಿಕೋಪವನ್ನು ಎದುರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಾಗ ಪರಿಹಾರ ಕೇಂದ್ರಗಳ ನಿರ್ವಹಣೆಗೆ ಬೇಕಾಗುವ ಎಲ್ಲಾ ಅಗತ್ಯ ದಿನಬಳಕೆಯ ವಸ್ತುಗಳನ್ನೂ ಸಹ ಖರೀದಿಸಿ ದಾಸ್ತಾನಿಟ್ಟುಕೊಂಡಿದೆ. ಅಲ್ಲದೆ, ನೆರೆ ಜಿಲ್ಲೆಗಳಾದ ಉಡುಪಿ ಮತ್ತು ಮೈಸೂರು ಜಿಲ್ಲೆಗಳಿಂದಲೂ ದಿನಬಳಕೆಯ ವಸ್ತುಗಳನ್ನು ಖರೀದಿಸಿ ಈ ಜಿಲ್ಲೆಗೆ ಕಳುಹಿಸಿದ್ದು, ಪ್ರಸ್ತುತ ಪರಿಹಾರ ಕೇಂದ್ರ ನಡೆಸಲು ಬೇಕಾಗುವಷ್ಟು ದಿನಬಳಕೆಯ ಸಾಮಾಗ್ರಿಗಳು ಜಿಲ್ಲಾಡಳಿತದ ಬಳಿ ದಾಸ್ತಾನಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 hour ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

4 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

10 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

16 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

17 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago