ರಾಜ್ಯ

ಕೊಡಗಿನಲ್ಲಿ ಐದು ದಿನ ಸಾಮಾನ್ಯ ಮಳೆ ಸಾಧ್ಯತೆ : ಶಾಲೆ-ಕಾಲೇಜುಗಳಿಗೆ ಎರಡು ದಿನ ರಜೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಶಾಂತವಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನೀರಿನ ಹರಿವು ತಗ್ಗಿದೆ. ಮುಂದಿನ 5 ದಿನಗಳವರೆಗೆ ಜಿಲ್ಲೆಯಾದ್ಯಂತ ಸಾಮಾನ್ಯ ಮಳೆಯಾಗಲಿದೆ ಮತ್ತು ಒಳನಾಡು ಪ್ರದೇಶಗಳ ಅಲ್ಲಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜಿಲ್ಲೆಯಲ್ಲಿ ಈಗಾಗಲೇ ಉಂಟಾಗಿದ್ದ ಪ್ರವಾಹ ಪರಿಸ್ಥಿತಿಯಿಂದ ಮತ್ತು ಕೆಲವು ಪ್ರದೇಶಗಳಲ್ಲಿ ಆದ ಭೂಕುಸಿತದಿಂದ ರಸ್ತೆ ಸಂಪರ್ಕಗಳು ಕಡಿತಗೊಂಡಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರು ಎಚ್ಚರದಿಂದಿರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಮತ್ತೊಂದೆಡೆ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿರುವುದರಿಂದ ಮತ್ತು ಕೆಲವು ಶಾಲೆಗಳಲ್ಲಿ ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಪರಿಹಾರ ಕೇಂದ್ರಗಳನ್ನು ತೆರೆದಿರುವುದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಆ.13 ಮತ್ತು 14ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.

Advertisement
Advertisement

ರಸ್ತೆಗಳು ಬಂದ್ :
ಜಿಲ್ಲೆಯಲ್ಲಿ ಉಂಟಾದ ಪ್ರವಾಹ- ಭೂಕುಸಿತದಿಂದಾಗಿ ಬಂದ್ ಆಗಿದ್ದ ಕೆಲವು ರಸ್ತೆಗಳು ಸೋಮವಾರದಿಂದ ಸಂಚಾರಕ್ಕೆ ಮುಕ್ತವಾಗಿವೆಯಾದರೂ ಮತ್ತೆ ಕೆಲವು ರಸ್ತೆಗಳು ಇನ್ನೂ ಬಂದ್ ಆಗಿವೆ.
ಮಡಿಕೇರಿ-ವೀರಾಜಪೇಟೆ ರಾಜ್ಯ ಹೆದ್ದಾರಿಯ ಬೇತ್ರಿ ಸೇತುವೆಗೆ ಪ್ರವಾಹದ ಸಂದರ್ಭ ಮರ ಬಡಿದ ಪರಿಣಾಮ ಸಣ್ಣ ಪ್ರಮಾಣದ ಬಿರುಕು ಕಾಣಿಸಿಕೊಂಡಿರುವುದಾಗಿ ಹೇಳಲಾಗಿದ್ದು, ಈ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಲಘು ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಬಸ್ ಸೇರಿದಂತೆ ಇತರ ವಾಹನಗಳು ಮಡಿಕೇರಿ-ಹಾಕತ್ತೂರು-ಮೂರ್ನಾಡು-ಕೊಂಡಂಗೇರಿ-ಹಾಲುಗುಂದ ಮಾರ್ಗವಾಗಿ ವೀರಾಜಪೇಟೆಗೆ ಸಂಚರಿಸಬಹುದಾಗಿದೆ.
ಸಿದ್ದಾಪುರ-ಕರಡಿಗೋಡು ರಸ್ತೆಯೂ ಸಂಚಾರಕ್ಕೆ ಮುಕ್ತವಾಗಿಲ್ಲ. ಸಿದ್ದಾಪುರದಿಂದ ಕರಡಿಗೋಡುವಿಗೆ ತೆರಳುವವರು ಮೈಸೂರು ರಸ್ತೆ, ಆರೆಂಜ್ ಕೌಂಟಿ ಮಾರ್ಗವಾಗಿ ಕರಡಿಗೋಡುವಿಗೆ ತೆರಳಬಹುದಾಗಿದೆ.
ಮೂರ್ನಾಡುವಿನಿಂದ ನಾಪೋಕ್ಲುವಿಗೆ ತೆರಳುವವರು ಹೊದ್ದೂರು, ಬಲಮುರಿ, ಪಾರಾಣೆ ಮೂಲಕ ನಾಪೋಕ್ಲುವಿಗೆ ಸಂಚರಿಸಬಹುದಾಗಿದ್ದು, ಸಿದ್ದಾಪರ-ಕೊಂಡಂಗೇರಿ ಮಾರ್ಗವಾಗಿ ತೆರಳಬೇಕಾದವರು ಒಂಟಿಯಂಗಡಿ, ದೇವಣಗೇರಿ ಹಾಲುಗುಂದ ಮಾರ್ಗವಾಗಿ ಕೊಂಡಂಗೇರಿಗೆ ಸಂಚರಿಸಬಹುದಾಗಿದೆ. ಗಾಳಿಬೀಡು-ಪಾಟಿ-ಕಾಲೂರು ಮಾರ್ಗವೂ ಬಂದ್ ಆಗಿರುವುದರಿಂದ ಕಾಲೂರಿಗೆ ತೆರಳುವವರು ಕೆ.ನಿಡುಗಣೆ, ಹೆಬ್ಬೆಟ್ಟಗೇರಿ-ದೇವಸ್ತೂರು ಮಾರ್ಗವಾಗಿ ಕಾಲೂರಿಗೆ ಸಂಚರಿಸಬಹುದಾಗಿದೆ.
ಮಡಿಕೇರಿ-ವೀರಾಜಪೇಟೆ-ಮಾಕುಟ್ಟಕ್ಕೆ ತೆರಳುವವರು ಮಡಿಕೇರಿ-ಹಾಕತ್ತೂರು- ಮೂರ್ನಾಡು- ಕೊಂಡಂಗೇರಿ-ಹಾಲುಗುಂದ-ವೀರಾಜಪೇಟೆ-ಗೋಣಿಕೊಪ್ಪ, ಪೊನ್ನಂಪೇಟೆ ಕುಟ್ಟ ಮಾರ್ಗವಾಗಿ ಕೇರಳದ ಮೂಲಕ ಮಾಕುಟ್ಟ ತಲುಪಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

7 minutes ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

44 minutes ago

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

1 hour ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

1 hour ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

9 hours ago