Advertisement
ಸುದ್ದಿಗಳು

ಕೊಡಗಿನಲ್ಲಿ ಕಡಿಮೆಯಾದ ಮಳೆ : ಸುಳ್ಯದಲ್ಲಿ ಭರ್ಜರಿ ಮಳೆ : ಕೇರಳದ 10 ಜಿಲ್ಲೆಗಳಲ್ಲಿ ರೆಡ್ ಎಲರ್ಟ್

Share

ಮಡಿಕೇರಿ/ಕಾಸರಗೋಡು/ಸುಳ್ಯ : ಕೊಡಗು ಜಿಲ್ಲೆಯಾದ್ಯಂತ ಈಗ ಸಾಧಾರಣ ಮಳೆಯಾಗುತ್ತಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಸುಳ್ಯದಲ್ಲೂ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ.  ಸೋಮವಾರ ಬೆಳಗಿನಿಂದಲೇ  ಮಳೆಯಾಗುತ್ತಿದೆ.  ಕೇರಳದಲ್ಲಿ  ಕಾಸರಗೋಡು ಸೇರಿದಂತೆ 10 ಜಿಲ್ಲೆಗಳಲ್ಲಿ ರೆಡ್ ಎಲರ್ಟ್ ಘೋಷಣೆ ಮಾಡಲಾಗಿದೆ. 

ಮಡಿಕೇರಿಯಲ್ಲಿ  ಮಳೆ ಕಡಿಮೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ನದಿ ನೀರು ರಸ್ತೆಯನ್ನು ಆವರಿಸಲು ಕೆಲವೇ ಅಡಿಗಳಷ್ಟೇ ಬಾಕಿ ಉಳಿದಿದ್ದು, ಅಧಿಕಾರಿಗಳು ಹಾಗೂ ರಕ್ಷಣಾ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕೊಡಗು, ಕೇರಳ ಗಡಿಭಾಗದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಪಕ್ಕದ ಭಾಗಮಂಡಲದ ನದಿಪಾತ್ರದಲ್ಲಿ ನೀರಿನ ಹರಿವು ಹೆಚ್ಚಾಗಿದೆ.

ಕೊಡಗು ಜಿಲ್ಲೆಯ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿದೆಯಾದರೂ ನಿರಂತರ ಮಳೆ ಸುರಿಯುತ್ತಿರುವುದರಿಂದ ಕೆಲವು ಭಾಗಗಳಲ್ಲಿ ಬರೆ ಕುಸಿದ ಘಟನೆಗಳು ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಮಲೆತಿರಿಕೆ ಬೆಟ್ಟದಲ್ಲಿರುವ ಎರಡು ಮನೆಗಳ ತಡೆಗೋಡೆಗಳ ಮೇಲೆ ಬರೆ ಕುಸಿದಿದೆ. ಕಳೆದ ವರ್ಷ ಮಹಾಮಳೆಗೆ ಭಾರೀ ಅನಾಹುತಗಳನ್ನು ಎದುರಿಸಿದ್ದ ಜೋಡುಪಾಲದಲ್ಲೂ ಬರೆಗಳು ಕುಸಿದಿದ್ದು ಕಳೆದ ಮಳೆಗಾಲದಲ್ಲಿ ಹಾನಿಗೀಡಾಗಿದ್ದ ಮಡಿಕೇರಿ ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬೃಹತ್ ಬರೆ ಕುಸಿಯುತ್ತಲೇ ಇದ್ದು, ಇಂದೂ ಕೂಡ ಮಣ್ಣು ಕುಸಿದು ಬಿದ್ದಿದೆ.

 

ಕೇರಳದಲ್ಲಿ ರೆಡ್ ಹಾಗೂ ಆರೆಂಜ್ ಅಲರ್ಟ್ :

ಕಾಸರಗೋಡು ಸೇರಿದಂತೆ ಕಣ್ಣೂರು, ವಯನಾಡ್, ಕೋಝಿಕ್ಕೋಡ್, ಇಡುಕ್ಕಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ ಸೇರಿದಂತೆ 10 ಜಿಲ್ಲೆಗಳಲ್ಲಿ  ರೆಡ್  ಹಾಗೂ ಆರೆಂಜ್ ಎಲರ್ಟ್ ಘೊಷಣೆ ಮಾಡಲಾಗಿದೆ. ಹೀಗಾಗಿ ಕೆಲವು ಜಿಲ್ಲೆಗಳಲ್ಲಿ  ಶಾಲೆ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕಳೆದ ಎರಡು ದಿನಗಳಿಂದ ಕೇರಳದ ವಿವಿಧ ಜಿಲ್ಲೆಗಳಲ್ಲಿ  ಭಾರೀ ಮಳೆಯಾಗುತ್ತಿದೆ.

 

ದಕ್ಷಿಣ ಕನ್ನಡದಲ್ಲೂ ಉತ್ತಮ ಮಳೆ:

ಮಂಗಳೂರು ಸೇರಿದಂತೆ ಜಿಲ್ಲೆಯ ವಿವಿದೆಡೆ ಉತ್ತಮ ಮಳೆಯಾಗಿದೆ. ಹವಾಮಾನ ಇಲಾಖೆಯ ವೆದರ್ ರಿಪೋರ್ಟ್ ಪ್ರಕಾರ ನಾಳೆ ಬೆಳ್ತಂಗಡಿ, ಕಾರ್ಕಳ, ಆಗುಂಬೆ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಡಿಕೇರಿ ಪ್ರದೇಶದಲ್ಲೂ ಹೆಚ್ಚಿನ ಮಳೆಯಾಗಲಿದೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

14 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

21 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

2 days ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago