Advertisement
ಸುದ್ದಿಗಳು

ಕೊಡಗಿನಲ್ಲಿ ಕಡಿಮೆಯಾದ ಮಳೆ : ಸುಳ್ಯದಲ್ಲಿ ಭರ್ಜರಿ ಮಳೆ : ಕೇರಳದ 10 ಜಿಲ್ಲೆಗಳಲ್ಲಿ ರೆಡ್ ಎಲರ್ಟ್

Share

ಮಡಿಕೇರಿ/ಕಾಸರಗೋಡು/ಸುಳ್ಯ : ಕೊಡಗು ಜಿಲ್ಲೆಯಾದ್ಯಂತ ಈಗ ಸಾಧಾರಣ ಮಳೆಯಾಗುತ್ತಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಸುಳ್ಯದಲ್ಲೂ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ.  ಸೋಮವಾರ ಬೆಳಗಿನಿಂದಲೇ  ಮಳೆಯಾಗುತ್ತಿದೆ.  ಕೇರಳದಲ್ಲಿ  ಕಾಸರಗೋಡು ಸೇರಿದಂತೆ 10 ಜಿಲ್ಲೆಗಳಲ್ಲಿ ರೆಡ್ ಎಲರ್ಟ್ ಘೋಷಣೆ ಮಾಡಲಾಗಿದೆ. 

ಮಡಿಕೇರಿಯಲ್ಲಿ  ಮಳೆ ಕಡಿಮೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ನದಿ ನೀರು ರಸ್ತೆಯನ್ನು ಆವರಿಸಲು ಕೆಲವೇ ಅಡಿಗಳಷ್ಟೇ ಬಾಕಿ ಉಳಿದಿದ್ದು, ಅಧಿಕಾರಿಗಳು ಹಾಗೂ ರಕ್ಷಣಾ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕೊಡಗು, ಕೇರಳ ಗಡಿಭಾಗದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಪಕ್ಕದ ಭಾಗಮಂಡಲದ ನದಿಪಾತ್ರದಲ್ಲಿ ನೀರಿನ ಹರಿವು ಹೆಚ್ಚಾಗಿದೆ.

ಕೊಡಗು ಜಿಲ್ಲೆಯ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿದೆಯಾದರೂ ನಿರಂತರ ಮಳೆ ಸುರಿಯುತ್ತಿರುವುದರಿಂದ ಕೆಲವು ಭಾಗಗಳಲ್ಲಿ ಬರೆ ಕುಸಿದ ಘಟನೆಗಳು ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಮಲೆತಿರಿಕೆ ಬೆಟ್ಟದಲ್ಲಿರುವ ಎರಡು ಮನೆಗಳ ತಡೆಗೋಡೆಗಳ ಮೇಲೆ ಬರೆ ಕುಸಿದಿದೆ. ಕಳೆದ ವರ್ಷ ಮಹಾಮಳೆಗೆ ಭಾರೀ ಅನಾಹುತಗಳನ್ನು ಎದುರಿಸಿದ್ದ ಜೋಡುಪಾಲದಲ್ಲೂ ಬರೆಗಳು ಕುಸಿದಿದ್ದು ಕಳೆದ ಮಳೆಗಾಲದಲ್ಲಿ ಹಾನಿಗೀಡಾಗಿದ್ದ ಮಡಿಕೇರಿ ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬೃಹತ್ ಬರೆ ಕುಸಿಯುತ್ತಲೇ ಇದ್ದು, ಇಂದೂ ಕೂಡ ಮಣ್ಣು ಕುಸಿದು ಬಿದ್ದಿದೆ.

 

ಕೇರಳದಲ್ಲಿ ರೆಡ್ ಹಾಗೂ ಆರೆಂಜ್ ಅಲರ್ಟ್ :

ಕಾಸರಗೋಡು ಸೇರಿದಂತೆ ಕಣ್ಣೂರು, ವಯನಾಡ್, ಕೋಝಿಕ್ಕೋಡ್, ಇಡುಕ್ಕಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ ಸೇರಿದಂತೆ 10 ಜಿಲ್ಲೆಗಳಲ್ಲಿ  ರೆಡ್  ಹಾಗೂ ಆರೆಂಜ್ ಎಲರ್ಟ್ ಘೊಷಣೆ ಮಾಡಲಾಗಿದೆ. ಹೀಗಾಗಿ ಕೆಲವು ಜಿಲ್ಲೆಗಳಲ್ಲಿ  ಶಾಲೆ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕಳೆದ ಎರಡು ದಿನಗಳಿಂದ ಕೇರಳದ ವಿವಿಧ ಜಿಲ್ಲೆಗಳಲ್ಲಿ  ಭಾರೀ ಮಳೆಯಾಗುತ್ತಿದೆ.

 

ದಕ್ಷಿಣ ಕನ್ನಡದಲ್ಲೂ ಉತ್ತಮ ಮಳೆ:

ಮಂಗಳೂರು ಸೇರಿದಂತೆ ಜಿಲ್ಲೆಯ ವಿವಿದೆಡೆ ಉತ್ತಮ ಮಳೆಯಾಗಿದೆ. ಹವಾಮಾನ ಇಲಾಖೆಯ ವೆದರ್ ರಿಪೋರ್ಟ್ ಪ್ರಕಾರ ನಾಳೆ ಬೆಳ್ತಂಗಡಿ, ಕಾರ್ಕಳ, ಆಗುಂಬೆ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಡಿಕೇರಿ ಪ್ರದೇಶದಲ್ಲೂ ಹೆಚ್ಚಿನ ಮಳೆಯಾಗಲಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

16 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago