Advertisement
Categories: Uncategorized

ಕೊಡಗಿನಲ್ಲಿ ಕಾಡಾನೆ ದಾಳಿ : ಮಕ್ಕಳು ಶಾಲೆಗೆ ಬರುತ್ತಿಲ್ಲ , ಮಹಿಳೆಯರಿಗೂ ಭಯ…!

Share

ಮಡಿಕೇರಿ: ಕೊಡಗಿನ ಎರಡು ಕಡೆ ಕಾಡಾನೆ ದಾಳಿ ಮಾಡಿದೆ. ಬಿಟ್ಟಂಗಾಲ ಗ್ರಾಮದಲ್ಲಿ ಬಾಲಕನ ಮೇಲೆ ಆನೆ ದಾಳಿ ಮಾಡಿದರೆ , ವಿರಾಜಪೇಟೆ ಸಮೀಪದ ಅಮ್ಮತ್ತಿ ಒಂಟಿಯಂಗಡಿಯಲ್ಲಿ ಮಹಿಳೆಯ ಮೇಲೆ ಕಾಡಾನೆ ದಾಳಿ ಮಾಡಿದೆ. ಹೀಗಾಗಿ ಆತಂಕದ ಸ್ಥಿತಿ ಇದೆ.

Advertisement
Advertisement

ಕಾಡಾನೆಯೊಂದರ ಹಠಾತ್ ದಾಳಿಗೆ ಸಿಲುಕಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಯೊಬ್ಬ ಗಂಭೀರ ಸ್ವರೂಪದಲ್ಲಿ ಗಾಯಗೊಂಡು, ಆತನ ಸಹಪಾಠಿಗಳು ಆಶ್ಚರ್ಯಕರ ರೀತಿಯಲ್ಲಿ ಪಾರಾಗಿರುವ ಘಟನೆ ನಗರದಂಚಿನ ಬಿಟ್ಟಂಗಾಲ ಗ್ರಾಮದಲ್ಲಿ ನಡೆದಿದೆ.
ಬಿಟ್ಟಂಗಾಲ ಗ್ರಾಮದ ನಿವಾಸಿ ಬಿ.ಎ.ಸುಭಾಷ್ ಚಂದ್ರ ಮತ್ತು ನೇತ್ರಾವತಿ ದಂಪತಿಗಳ ಪುತ್ರ ಚಂದನ್ ಬಿ.ಎಸ್.(11) ಎಂಬಾತ ಗಾಯಗೊಂಡ ವಿದ್ಯಾರ್ಥಿ. ಕಾಡಾನೆ ದಾಳಿಯಿಂದ ಈತನ ತಲೆ ಮತ್ತು ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಬಿಟ್ಟಂಗಾಲ ಗ್ರಾಮದ ಅಂಬಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ಬೆಳಗ್ಗೆ ಸುಭಾಷ್‍ಚಂದ್ರ ಅವರ ಮಕ್ಕಳಾದ ಚಂದನ್, ಈತನ ಸಹೋದರ ಕೀರ್ತನ್, ತಂಗಿ ಶಾಲಿನಿ ಮತ್ತು ಸುಭಾಷ್ ಚಂದ್ರ ಅವರ ತಮ್ಮನ ಮಗ ಪವನ್ ಅವರು ತೆರಳುತ್ತಿದ್ದರು. ಇವರು ಶಾಲೆಗೆ ತೆರಳುವ ಮಾರ್ಗದ ಸಮೀಪದ ಆಲ್ಬರ್ಟ್ ಎಂಬವರ ತೋಟದಲ್ಲಿ ಐದು ಕಾಡಾನೆಗಳ ಹಿಂಡು ಬೀಡುಬಿಟ್ಟಿತ್ತು ಎನ್ನಲಾಗಿದೆ.
ಮಕ್ಕಳು ಶಾಲೆಯತ್ತ ಸಾಗುತ್ತಿದ್ದ ಸಂದರ್ಭ ಹಠಾತ್ತನೆ ಕಾಡಾನೆಯೊಂದು ಮಕ್ಕಳ ಮೇಲೆ ದಾಳಿ ನಡೆಸಿ, ಚಂದನ್‍ನನ್ನು ಸೊಂಡಿಲಿನಿಂದ ಎತ್ತಿ ಒಗೆದಿದೆ. ಈ ಹಂತದಲ್ಲಿ ಭಯಭೀತರಾದ ಸಹಪಾಠಿಗಳು ಜೋರಾಗಿ ಕಿರುಚಿಕೊಂಡು ಸ್ಥಳದಿಂದ ಓಡಿ ಅಪಾಯದಿಂದ ಪಾರಾಗಿ, ಸುತ್ತಮುತ್ತಲಿನ ಮನೆಮಂದಿಗೆ ವಿಷಯ ಮುಟ್ಟಿಸಿದರು.
ತಕ್ಷಣ ಗ್ರಾಮಸ್ಥರು ಸ್ಥಳಕ್ಕೆ ತೆರಳಿ ಗಾಯಗೊಂಡು ಬಿದ್ದಿದ್ದ ಚಂದನ್‍ನನ್ನು ವೀರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದರು. ನಂತರ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಮಂಗಳೂರಿಗೆ ಕರೆದೊಯ್ಯಲಾಯಿತು.

 

ಕಾರ್ಮಿಕ ಮಹಿಳೆಯರ ಮೇಲೆ ಕಾಡಾನೆ ದಾಳಿ

ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆಯರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ವಿರಾಜಪೇಟೆ ಸಮೀಪದ ಅಮ್ಮತ್ತಿ ಒಂಟಿಯಂಗಡಿಯಲ್ಲಿ ನಡೆದಿದೆ. ಒಂಟಿಯಂಗಡಿ ಚಾಮುಂಡಿ ಪೈಸಾರಿಯ ಕಾರ್ಮಿಕ ಮಹಿಳೆ ಅಮ್ಮಾಲು ಬಾಲಕೃಷ್ಣ ಮತ್ತು ಕಮಲಾ ಮಣಿ ಎಂಬುವವರು ಗಾಯಗೊಂಡವರಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಎದುರಾದ ಆನೆ ಈ ಇಬ್ಬರು ಕಾರ್ಮಿಕ ಮಹಿಳೆಯರಿಗೆ ಸೊಂಡಿಲಿನಿಂದ ಗುದ್ದಿ ಪರಾರಿಯಾಗಿದೆ. ಗಾಯಾಳುಗಳನ್ನು ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅರಣ್ಯಾಧಿಕಾರಿ ಗೊಪಾಲ್ ಹಾಗೂ ಸಿಬ್ಬಂದಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಳುಗಳ ಯೋಗಕ್ಷೇಮ ವಿಚಾರಿಸಿದರು.

 

ಕಾಡಾನೆ ಭಯದಿಂದ  ಬಿಟ್ಟಂಗಾಲ ಮಕ್ಕಳು ಶಾಲೆಗೆ ಬರುತ್ತಿಲ್ಲ

ಬಿಟ್ಟಂಗಾಲ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷಗಳಿಂದ ಕಾಡಾನೆಗಳ ಹಾವಳಿ ಹೆಚ್ಚಾಗಿರುವುದರಿಂದ ಕಾರ್ಮಿಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಬಿಟ್ಟಂಗಾಲ ಅಂಬಲ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಕಮಲಾಕ್ಷಿ ಟಿ.ಎನ್. ಕಳವಳ ವ್ಯಕ್ತಪಡಿಸಿದ್ದಾರೆ.
ಗಾಯಗೊಂಡು ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿ ಚಂದನ್‍ನನ್ನು ಭೇಟಿ ಮಾಡಿದ ಸಂದರ್ಭ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಟ್ಟಂಗಾಲ ವಿಭಾಗದಲ್ಲಿ ಕಾರ್ಮಿಕ ಸಮೂಹ ಹೆಚ್ಚಾಗಿದೆ. ಕಾಡಾನೆಗಳ ಹಾವಳಿಯ ಹಿನ್ನೆಲೆಯಲ್ಲಿ ಮಕ್ಕಳು ಶಾಲೆಗೆ ಬರಲು ಹಿಂದೇಟು ಹಾಕುತ್ತಿರುವುದರಿಂದ ವಿದ್ಯಾರ್ಥಿಗಳ ಸಂಖ್ಯೆಯೂ ಕ್ಷೀಣಿಸಿದೆ. ಅರಣ್ಯ ಇಲಾಖೆ ಕಾಡಾನೆ ಹಾವಳಿ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

5 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

6 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago