ಸುದ್ದಿಗಳು

ಕೊಡಗಿನಲ್ಲಿ ನಿರಂತರ ತುಂತುರು ಮಳೆ : ಹಾರಂಗಿಯಲ್ಲಿ ನೀರಿನ ಮಟ್ಟ ಹೆಚ್ಚಳ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಡಿಕೇರಿ : ರಾಜ್ಯ ವ್ಯಾಪಿ ಧಾರಾಕಾರ ಮಳೆಯಾಗುತ್ತಿದ್ದರೆ ಕೊಡಗು ಜಿಲ್ಲೆಯಲ್ಲಿ ಮಾತ್ರ ನಿರಂತರ ತುಂತುರು ಮಳೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ ಉತ್ತಮ ಮಳೆಯ ವಾತಾವರಣದಲ್ಲಿದ್ದ ಜಿಲ್ಲೆಯಲ್ಲೀಗ ಮೋಡ ಮತ್ತು ಮಂಜು ಕವಿದಿದೆ. ಬಿರುಸಲ್ಲದಿದ್ದರೂ ಎಡೆಬಿಡದೆ ಮಳೆಹನಿ ಬೀಳುತ್ತಿರುವುದರಿಂದ ಜನ ಕಿರಿಕಿರಿ ಅನುಭವಿಸುಂತಾಗಿದೆ.

Advertisement

ಆಗಸ್ಟ್ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಪ್ರವಾಹದ ಪರಿಸ್ಥಿತಿಯನ್ನು ಎದುರಿಸಿದ್ದ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಮತ್ತೆ ಬಿರುಸು ಪಡೆದುಕೊಂಡಿತ್ತು. ಆದರೆ ಮಂಗಳವಾರ ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ, ತಲಕಾವೇರಿ ಸೇರಿದಂತೆ ವಿವಿಧೆಡೆ ತುಂತುರು ಮಳೆಯಾಗಿದೆ. ಹಾರಂಗಿ ಜಲಾನಯನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಾರಂಗಿ ಜಲಾಶಯ ಮತ್ತೊಮ್ಮೆ ಭರ್ತಿಯಾಗಿದೆ.

ವರ್ಷದಲ್ಲಿ ಒಂದು ಭಾರಿ ಮಾತ್ರ ಭರ್ತಿಯಾಗಿ ಹರಿಯುತ್ತಿದ್ದ ಹಾರಂಗಿ ಅಣೆಕಟ್ಟೆ ಈ ಬಾರಿ ವರ್ಷದಲ್ಲಿ ಎರಡನೇ ಬಾರಿ ಭರ್ತಿಯಾಗಿದೆ. ಇದೇ ಮೊದಲ ಬಾರಿಗೆ ಅಕ್ಟೋಬರ್ ತಿಂಗಳಲ್ಲಿ ಅಣೆಕಟ್ಟು ಭರ್ತಿಯಾಗಿ ನದಿಗೆ ಹರಿಸುತ್ತಿರುವುದು ಕಂಡುಬಂದಿದೆ. ವರ್ಷಂಪ್ರತಿ ಜುಲೈ ತಿಂಗಳಲ್ಲಿ ಅಣೆಕಟ್ಟು ಭರ್ತಿಯಾಗಿ ನದಿಗೆ ಹೆಚ್ಚುವರಿ ನೀರು ಹರಿಸುವುದು ಸಾಮಾನ್ಯವಾಗಿದೆ. ಆದರೆ ಈ ಬಾರಿ ಆಗಸ್ಟ್, ಸೆಪ್ಟಂಬರ್, ಅಕ್ಟೋಬರ್ ತಿಂಗಳುಗಳಲ್ಲಿ ಬೇಸಾಯಕ್ಕೆ ಅನುಕೂಲವಾಗುವಂತೆ ಕೊಡಗು, ಹಾಸನ ಮತ್ತು ಮೈಸೂರು ಜಿಲ್ಲೆಗಳ ರೈತರಿಗೆ ನಾಲೆಗಳ ಮೂಲಕ ನೀರನ್ನು ಹರಿಸಲಾಗುತ್ತಿದೆ.

Advertisement

ಕೊಡಗಿನ ಮಳೆ ವಿವರ: ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 7.68 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2855.25 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 4040.08 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲೂಕಿನಲ್ಲಿ ಜನವರಿಯಿಂದ ಇಲ್ಲಿಯವರೆಗಿನ ಮಳೆ 3817.56 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 5831.45 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 14.47 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2741.33 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 3083.56 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.57 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2006.88 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 3205.29 ಮಿ.ಮೀ. ಮಳೆಯಾಗಿತ್ತು.

Advertisement

ಹಾರಂಗಿ ಜಲಾಶಯದ ನೀರಿನ ಮಟ್ಟ:  ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.24 ಅಡಿಗಳು, ಕಳೆದ ವರ್ಷ ಇದೇ ದಿನ 2850.33 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 6.60 ಮಿ.ಮೀ., ಇಂದಿನ ನೀರಿನ ಒಳಹರಿವು 1354 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 310 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 750 ಕ್ಯುಸೆಕ್. ನಾಲೆಗೆ 500 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ ನಾಲೆಗೆ 1400 ಕ್ಯುಸೆಕ್ ಆಗಿತ್ತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…

3 hours ago

ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

4 hours ago

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

11 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

11 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

19 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

21 hours ago