ಕೊಡಗಿನಲ್ಲಿ ಪರಿಹಾರ ಅದಾಲತ್ : ಮತ್ತೆ ಹರಿದು ಬರುತ್ತಲೇ ಇದೆ ಸಂತ್ರಸ್ತರ ಅರ್ಜಿ

May 28, 2019
7:47 PM

ಮಡಿಕೇರಿ: ಕೊಡಗು ಜಿಲ್ಲಾಡಳಿತ ವತಿಯಿಂದ ನೆರೆ ಸಂತೃಸ್ತರಿಗಾಗಿ ಏರ್ಪಡಿಸಲಾಗಿರುವ ಮೂರು ದಿನಗಳ ಪರಿಹಾರ ಅದಾಲತ್‍ನಲ್ಲಿ ಎರಡನೇ ದಿನವಾದ ಮಂಗಳವಾರ ಕೂಡ  ಸಂತ್ರಸ್ತರು ಪಾಲ್ಗೊಂಡು ತಮ್ಮ ಹೆಸರು ನೋಂದಾಯಿಸಿಕೊಂಡು ಸಮಸ್ಯೆಗಳ ಬಗ್ಗೆ ಮನವಿ ಮಾಡಿದರು.

ಬೆಳೆ ಹಾಗೂ ಮನೆ ಹಾನಿ ಮತ್ತಿತರ ಬಗ್ಗೆ ಪರಿಹಾರಕ್ಕಾಗಿ ಮನವಿ ಮಾಡಿದರು. ಪರಿಹಾರ ಅದಾಲತ್ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು  ಪರಿಶೀಲಿಸಿದರು. ಪ್ರಕೃತಿ ವಿಕೋಪದಿಂದಾಗಿ ವಾಸದ ಮನೆ ಅಥವಾ ಬೆಳೆ ಹಾನಿ ಸಂಬಂಧಿಸಿದಂತೆ ಯಾವುದಾದರೂ ಕುಟುಂಬಕ್ಕೆ ಪರಿಹಾರ ನೀಡಲು ಬಿಟ್ಟು ಹೋಗಿದ್ದಲ್ಲಿ ಪರಿಹಾರ ಒದಗಿಸಲು ಪರಿಹಾರ ಅದಲಾತ್ ಹಮ್ಮಿಕೊಳ್ಳಲಾಗಿದ್ದು, ಮೇ, 29 ಕ್ಕೆ ಕೊನೆಗೊಳ್ಳಲಿದೆ.

ಮೇ 29 ರಂದು ನಗರದ ಜಿಲ್ಲಾಡಳಿತ ಭವನದ 2ನೇ ಮಹಡಿಯ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಪರಿಹಾರ ಅದಾಲತ್‍ಗೆ ಹಾಜರಾಗಿ ಸಮಸ್ಯೆ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್ ನಟೇಶ್, ಗೋವಿಂದರಾಜು ಮತ್ತಿತರರು ಹಾಜರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್
ಜಲಾಶಯ ಪಕ್ಕದಲ್ಲೇ ಟ್ಯಾಂಕರ್ ನೀರು | ಅಡಿಕೆ ತೋಟ ಉಳಿಸಿಕೊಳ್ಳಲು ರೈತರ ಹೋರಾಟ
March 2, 2026
1:41 PM
by: ಮಿರರ್‌ ಡೆಸ್ಕ್
ಮಾನವ–ವನ್ಯಜೀವಿ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ
March 2, 2026
7:15 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror