ಮಡಿಕೇರಿ: ಕೊಡಗು ಜಿಲ್ಲಾಡಳಿತ ವತಿಯಿಂದ ನೆರೆ ಸಂತೃಸ್ತರಿಗಾಗಿ ಏರ್ಪಡಿಸಲಾಗಿರುವ ಮೂರು ದಿನಗಳ ಪರಿಹಾರ ಅದಾಲತ್ನಲ್ಲಿ ಎರಡನೇ ದಿನವಾದ ಮಂಗಳವಾರ ಕೂಡ ಸಂತ್ರಸ್ತರು ಪಾಲ್ಗೊಂಡು ತಮ್ಮ ಹೆಸರು ನೋಂದಾಯಿಸಿಕೊಂಡು ಸಮಸ್ಯೆಗಳ ಬಗ್ಗೆ ಮನವಿ ಮಾಡಿದರು.
ಬೆಳೆ ಹಾಗೂ ಮನೆ ಹಾನಿ ಮತ್ತಿತರ ಬಗ್ಗೆ ಪರಿಹಾರಕ್ಕಾಗಿ ಮನವಿ ಮಾಡಿದರು. ಪರಿಹಾರ ಅದಾಲತ್ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಪರಿಶೀಲಿಸಿದರು. ಪ್ರಕೃತಿ ವಿಕೋಪದಿಂದಾಗಿ ವಾಸದ ಮನೆ ಅಥವಾ ಬೆಳೆ ಹಾನಿ ಸಂಬಂಧಿಸಿದಂತೆ ಯಾವುದಾದರೂ ಕುಟುಂಬಕ್ಕೆ ಪರಿಹಾರ ನೀಡಲು ಬಿಟ್ಟು ಹೋಗಿದ್ದಲ್ಲಿ ಪರಿಹಾರ ಒದಗಿಸಲು ಪರಿಹಾರ ಅದಲಾತ್ ಹಮ್ಮಿಕೊಳ್ಳಲಾಗಿದ್ದು, ಮೇ, 29 ಕ್ಕೆ ಕೊನೆಗೊಳ್ಳಲಿದೆ.
ಮೇ 29 ರಂದು ನಗರದ ಜಿಲ್ಲಾಡಳಿತ ಭವನದ 2ನೇ ಮಹಡಿಯ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಪರಿಹಾರ ಅದಾಲತ್ಗೆ ಹಾಜರಾಗಿ ಸಮಸ್ಯೆ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್ ನಟೇಶ್, ಗೋವಿಂದರಾಜು ಮತ್ತಿತರರು ಹಾಜರಿದ್ದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…
ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…
ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…
‘ಪನಸೋಪಾಖ್ಯಾನ’ ಪ್ರಸಂಗವು ತಾಳಮದ್ದಳೆ ರೂಪದಲ್ಲಿ ಪ್ರಸ್ತುತವಾಯಿತು. ಇದು ಕಾಲ್ಪನಿಕ ಕಥಾಭಾಗವನ್ನು ಹೊಂದಿರುವ ಪ್ರಸಂಗ.…
ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.