ಮಡಿಕೇರಿ: ಕೊಡಗು ಜಿಲ್ಲಾಡಳಿತ ವತಿಯಿಂದ ನೆರೆ ಸಂತೃಸ್ತರಿಗಾಗಿ ಏರ್ಪಡಿಸಲಾಗಿರುವ ಮೂರು ದಿನಗಳ ಪರಿಹಾರ ಅದಾಲತ್ನಲ್ಲಿ ಎರಡನೇ ದಿನವಾದ ಮಂಗಳವಾರ ಕೂಡ ಸಂತ್ರಸ್ತರು ಪಾಲ್ಗೊಂಡು ತಮ್ಮ ಹೆಸರು ನೋಂದಾಯಿಸಿಕೊಂಡು ಸಮಸ್ಯೆಗಳ ಬಗ್ಗೆ ಮನವಿ ಮಾಡಿದರು.
ಬೆಳೆ ಹಾಗೂ ಮನೆ ಹಾನಿ ಮತ್ತಿತರ ಬಗ್ಗೆ ಪರಿಹಾರಕ್ಕಾಗಿ ಮನವಿ ಮಾಡಿದರು. ಪರಿಹಾರ ಅದಾಲತ್ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಪರಿಶೀಲಿಸಿದರು. ಪ್ರಕೃತಿ ವಿಕೋಪದಿಂದಾಗಿ ವಾಸದ ಮನೆ ಅಥವಾ ಬೆಳೆ ಹಾನಿ ಸಂಬಂಧಿಸಿದಂತೆ ಯಾವುದಾದರೂ ಕುಟುಂಬಕ್ಕೆ ಪರಿಹಾರ ನೀಡಲು ಬಿಟ್ಟು ಹೋಗಿದ್ದಲ್ಲಿ ಪರಿಹಾರ ಒದಗಿಸಲು ಪರಿಹಾರ ಅದಲಾತ್ ಹಮ್ಮಿಕೊಳ್ಳಲಾಗಿದ್ದು, ಮೇ, 29 ಕ್ಕೆ ಕೊನೆಗೊಳ್ಳಲಿದೆ.
ಮೇ 29 ರಂದು ನಗರದ ಜಿಲ್ಲಾಡಳಿತ ಭವನದ 2ನೇ ಮಹಡಿಯ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಪರಿಹಾರ ಅದಾಲತ್ಗೆ ಹಾಜರಾಗಿ ಸಮಸ್ಯೆ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್ ನಟೇಶ್, ಗೋವಿಂದರಾಜು ಮತ್ತಿತರರು ಹಾಜರಿದ್ದರು.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…