ಮಡಿಕೇರಿ: ಕೊಡಗು ಜಿಲ್ಲಾಡಳಿತ ವತಿಯಿಂದ ನೆರೆ ಸಂತೃಸ್ತರಿಗಾಗಿ ಏರ್ಪಡಿಸಲಾಗಿರುವ ಮೂರು ದಿನಗಳ ಪರಿಹಾರ ಅದಾಲತ್ನಲ್ಲಿ ಎರಡನೇ ದಿನವಾದ ಮಂಗಳವಾರ ಕೂಡ ಸಂತ್ರಸ್ತರು ಪಾಲ್ಗೊಂಡು ತಮ್ಮ ಹೆಸರು ನೋಂದಾಯಿಸಿಕೊಂಡು ಸಮಸ್ಯೆಗಳ ಬಗ್ಗೆ ಮನವಿ ಮಾಡಿದರು.
ಬೆಳೆ ಹಾಗೂ ಮನೆ ಹಾನಿ ಮತ್ತಿತರ ಬಗ್ಗೆ ಪರಿಹಾರಕ್ಕಾಗಿ ಮನವಿ ಮಾಡಿದರು. ಪರಿಹಾರ ಅದಾಲತ್ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಪರಿಶೀಲಿಸಿದರು. ಪ್ರಕೃತಿ ವಿಕೋಪದಿಂದಾಗಿ ವಾಸದ ಮನೆ ಅಥವಾ ಬೆಳೆ ಹಾನಿ ಸಂಬಂಧಿಸಿದಂತೆ ಯಾವುದಾದರೂ ಕುಟುಂಬಕ್ಕೆ ಪರಿಹಾರ ನೀಡಲು ಬಿಟ್ಟು ಹೋಗಿದ್ದಲ್ಲಿ ಪರಿಹಾರ ಒದಗಿಸಲು ಪರಿಹಾರ ಅದಲಾತ್ ಹಮ್ಮಿಕೊಳ್ಳಲಾಗಿದ್ದು, ಮೇ, 29 ಕ್ಕೆ ಕೊನೆಗೊಳ್ಳಲಿದೆ.
ಮೇ 29 ರಂದು ನಗರದ ಜಿಲ್ಲಾಡಳಿತ ಭವನದ 2ನೇ ಮಹಡಿಯ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಪರಿಹಾರ ಅದಾಲತ್ಗೆ ಹಾಜರಾಗಿ ಸಮಸ್ಯೆ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್ ನಟೇಶ್, ಗೋವಿಂದರಾಜು ಮತ್ತಿತರರು ಹಾಜರಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…